ಶ್ರದ್ಧಾಳ ಕೊಲೆ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ಪೊಲೀಸ್ ಠಾಣೆಗೆ ಮನವಿ

0

ಪುತ್ತೂರು: ದೆಹಲಿಯಲ್ಲಿ ‘ ಲವ್ ಜಿಹಾದ್’ ನಡೆಸಿ ಹಿಂದೂ ಯುವತಿ ಶ್ರದ್ಧಾಳನ್ನು ಕೊಚ್ಚಿ ಕೊಲೆ ಮಾಡಿರುವ ಕೃತ್ಯ ಅತ್ಯಂತ ಖಂಡನೀಯ . ಈ ಕೃತ್ಯವನ್ನು ಎಸಗಿದ ಪಾತಕಿಗೆ ಹಾಗೂ ಅವನಿಗೆ ಸಹಕಾರ ನೀಡಿದವರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪುತ್ತೂರು ನಗರ ಬಿಜೆಪಿ ಮಹಿಳಾ ಮೋರ್ಚಾದಿಂದ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಮನವಿ ನೀಡಲಾಗಿದೆ.

ಆರೋಪಿ ಅಫ್ತಾಬ್ ಶ್ರದ್ಧಾಳನ್ನು ಕೊಲೆ ಮಾಡಿ ೩೫ ತುಂಡು ಮಾಡಿ ರೆಫ್ರಿಜಿಟರಿನಲ್ಲಿ ಇಟ್ಟು ಕೆಲವು ದಿನಗಳ ನಂತರ ಬೇರೆ ಬೇರೆ ಕಡೆಗಳಲ್ಲಿ ಬಿಸಾಡಿರುವುದು ಆತನ ಕ್ರೂರತೆ ಎಷ್ಟಿತ್ತು ಎಂಬುದನ್ನು ತಿಳಿಸುತ್ತದೆ. ಇಂತಹ ಒಂದು ಆರೋಪಿಗೆ ಮರಣದಂಡನೆಯ ಶಿಕ್ಷೆಯನ್ನು ವಿಧಿಸಬೇಕು.
ನಮ್ಮ ಊರಿನಲ್ಲಿಯೂ ಲವ್ ಜಿಹಾದ್ಗೆ , ಮತಾಂತರಕ್ಕೆ ಬಲಿಯಾಗದಂತೆ ಹಿಂದೂ ಸಹೋದರಿಯರಿಗೆ ರಕ್ಷಣೆ ಒದಗಿಸಬೇಕೆಂದು, ಇಂತಹ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಯಿತು. ಈ ಸಂದರ್ಭ ಮಹಿಳಾ ಮೋರ್ಚಾ ಅಧ್ಯಕ್ಷೆ ಶರಾವತಿ ರವಿ ನಾರಾಯಣ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಪೆರುವೋಡಿ , ನಗರ ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಜಯಶ್ರೀ ನಾಯಕ್, ಶ್ರೀಮತಿ ಪ್ರಭಾವತಿ ಸದಸ್ಯರಾದ ನಳಿನಾಕ್ಷಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here