ಮಂಗಳೂರಿನ ಬಾಂಬ್ ಸ್ಫೋಟ ಪ್ರಕರಣ: ಸಮಗ್ರ ತನಿಖೆ ನಡೆಸಲು ಶರಣ್ ಪಂಪವೆಲ್ ಮನವಿ

0

ಮಂಗಳೂರು: ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದ್ದು, ಈ ಘಟನೆ ನಮಗೆ ಸವಾಲೆಸದಂತಾಗಿದೆ. ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪವೆಲ್ ಹೇಳಿದ್ದಾರೆ.

ಈ ಉಗ್ರ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ.‌ ಈ ಕೃತ್ಯದಲ್ಲಿ ಸ್ಥಳೀಯರ ಕೈವಾಡವಿರದೆ ಈ ಘಟನೆ ನಡೆಯಲು ಸಾಧ್ಯವಿಲ್ಲ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಾಂಬ್ ಟ್ರಯಲ್ ಬ್ಲಾಸ್ಟ್ ನಡೆದಿದೆ. ಆದ್ದರಿಂದ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಿ ಈ ಕೃತ್ಯದ ಹಿಂದೆ ಕೈಜೋಡಿಸಿದವರನ್ನು ಶೀಘ್ರವಾಗಿ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಶರಣ್ ಸರಕಾರವನ್ನು ಆಗ್ರಹಿಸಿದ್ದಾರೆ.

 

LEAVE A REPLY

Please enter your comment!
Please enter your name here