ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ನಾಪತ್ತೆ ಪ್ರಕರಣದ ತನಿಖೆ ಚುರುಕುಗೊಳಿಸುವಂತೆ ಬಿಜೆಪಿ ಮಹಿಳಾ ಮೋರ್ಚಾ ಮನವಿ

0

ಶ್ರದ್ಧಾ ಕೊಲೆ ಆರೋಪಿ ಅಪ್ತಾಬ್‌ಗೆ ಕಠಿಣ ಶಿಕ್ಷೆಗೂ ಒತ್ತಾಯ

ಕಡಬ: ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ನಾಪತ್ತೆ ಪ್ರಕರಣದ ತನಿಖೆ ಚುರುಕುಗೊಳಿಸುವಂತೆ ಹಾಗೂ ಶ್ರದ್ಧಾ ಕೊಲೆ ಪ್ರಕರಣದ ಆರೋಪಿ ಅಪ್ತಾಬ್‌ಗೆ ಕಠಿಣ ಶಿಕ್ಷೆಗೆ ಸಂಬಂಧಿಸಿದಂತೆ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕಡಬ ಪೊಲೀಸ್ ಠಾಣೆಗೆ ಮನವಿ ನೀಡಲಾಗಿದೆ.


ಮುಂಬೈನ ಹಿಂದೂ ಹುಡುಗಿ ಶ್ರದ್ಧಾ ಎಂಬಾಕೆಯನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಆರೋಪಿ ಅಪ್ತಾಬ್ ಅಮೀನ್‌ಗೆ ಕಠಿಣೆ ಶಿಕ್ಷೆ ನೀಡುವಂತೆ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ನಾಪತ್ತೆ ಪ್ರಕರಣದ ತನಿಖೆ ಚುರುಕುಗೊಳಿಸಲು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕಡಬ ಸಬ್‌ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಅವರು ಮನವಿ ಸ್ವೀಕರಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷೆ ಸುಭದಾ ಎಸ್.ರೈ, ಪ್ರಧಾನ ಕಾರ್ಯದರ್ಶಿ ತೇಜಸ್ವಿನಿಶೇಖರ ಗೌಡ ಕಟ್ಟಪುಣಿ, ಸದಸ್ಯೆ ಸರೋಜಿನಿ ಆಚಾರ್ಯ, ಬಿಜೆಪಿ ಸುಳ್ಯ ಮಂಡಲದ ಉಪಾಧ್ಯಕ್ಷೆ ಜಯಂತಿ ಆರ್.ಗೌಡ, ಸದಸ್ಯೆ ಹೇಮಾಮೋಹನ್‌ದಾಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here