ಬಾರ್ಯ ಗ್ರಾಮದ ಸಾಹೀದಾ ನಾಪತ್ತೆ, ಮನೆಯವರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು

0

ಉಪ್ಪಿನಂಗಡಿ : ಇಲ್ಲಿನ  ಸಮೀಪದ ಬಾರ್ಯ ಗ್ರಾಮದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19) ಎಂಬಾಕೆ ನ.19ರಂದು ಮಧ್ಯ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.


ತನ್ನ ಎಂಟು ಮಕ್ಕಳ ಪೈಕಿ ಐದು ಮಂದಿ ಹೆಣ್ಣು ಮಕ್ಕಳಾಗಿದ್ದು, ಇವರ ಪೈಕಿ ಕೊನೆಯವಳಾದ ಸಾಹೀದಾ ಶನಿವಾರ ರಾತ್ರಿ ಊಟ ಮಾಡಿ ಮಲಗಿದಾಕೆ ತಡ ರಾತ್ರಿ 1 ಗಂಟೆ ಸುಮಾರಿಗೆ ಎದ್ದು ನೋಡಿದಾಗ ನಾಪತ್ತೆಯಾಗಿರುವುದು ಕಂಡು ಬಂದಿರುತ್ತದೆ. ಈಕೆಗೆ ಕಳೆಂಜಿಬೈಲಿನ ಮುದಾಸೀರ್ ಎಂಬಾತನೊಂದಿಗೆ ಮೊಬೈಲ್ ಸಂಪರ್ಕ ಇದ್ದು , ಆತನೊಂದಿಗೆ ಹೋಗಿರುವ ಸಂಶಯವಿದೆ ಎಂದು ಅಬ್ದುಲ್ ಖಾದ್ರಿಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ನಾಪತ್ತೆಯಾದ ಯುವತಿಯು ಎಲ್ಲಿಯಾದರೂ ಪತ್ತೆಯಾದರೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here