ಪುತ್ತೂರು ಮೂಲದ ಹಿಂದೂ ಯುವತಿಯೊಂದಿಗೆ ಮುಸ್ಲಿಂ ಯುವಕನ ವಿವಾಹ ! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಆಕ್ಷೇಪಣಾ ಸಲ್ಲಿಸಲು ಅವಕಾಶವಿರುವ ನೊಟೀಸ್ !

0

ಇದೊಂದು ಲವ್ ಜಿಹಾದ್ – ಹಿಂದು ಸಂಘಟನೆಗಳಿಂದ ಆರೋಪ

ಪುತ್ತೂರು: ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಪುತ್ತೂರು ಮೂಲದ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕರೊಬ್ಬರು ವಿವಾಹವಾಗುವುದಾಗಿ ವಿವಾಹ ನೋಂದಾಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್‌ವೊಂದು ಸಾಮಾಜಿಕ ಜಾಲಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ.

ಪುತ್ತೂರು ಮೂಲದವರಾಗಿದ್ದು ಇದೀಗ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಅಕ್ಷತಾ ಕೆ. ಅವರು ಬೆಂಗಳೂರಿನ ನ್ಯಾಪನಹಳ್ಳಿ ನಿವಾಸಿ ಶೇಖ್ ಮಹಮ್ಮದ್ ಸಲೀಮ್ ಅವರನ್ನು ವಿವಾಹ ಆಗುವುದಾಗಿ ಬೆಂಗಳೂರಿನ ವಿವಾಹ ನೋಂದಾಣಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಿವಾಹ ನೋಂದಾಣೆ ಕಚೇರಿಯಲ್ಲಿ ವಿವಾಹಕ್ಕೆ ಅವಕಾಶ ನೀಡುವ ಮೊದಲು ಯಾರಿಂದಲಾದರೂ ಆಕ್ಷೇಪಣೆ ಇದೆಯೇ ಎಂಬ ಕುರಿತು 30 ದಿನದ ನೋಟೀಸ್ ಅನ್ನು ಕಚೇರಿಯಲ್ಲಿ ಅಳವಡಿಸಿದ್ದರು. ಆ ನೋಟೀಸ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಈ ಕುರಿತು ಹಿಂದೂ ಸಂಘಟನೆಗಳು ಇದೊಂದು ಲವ್‌ ಜಿಹಾದ್ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here