ಮೈಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ ಪೌರಕಾರ್ಮಿಕ ಮೃತ್ಯು

0

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕರೋರ್ವರು ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ಮೈಸೂರು ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದ ರಥ ಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47 ವ.)ರವರು ಮೃತದುರ್ದೈವಿ.

ನ.21ರಂದು ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ವರ್ಷಗಳಿಂದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, 2 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಾಯಗೊಂಡು ಚೇತರಿಸಿಕೊಂಡಿದ್ದರು, 3 ವರ್ಷಗಳ ಹಿಂದೆ ಖಾಯಂ ಪೌರ ಕಾರ್ಮಿಕರಾಗಿ ಭಡ್ತಿ ಹೊಂದಿದ್ದರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here