ರೈತ ಸಂಘ, ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಉಪ್ಪಿನಂಗಡಿಯ ಬಾಲಸುಬ್ರಹ್ಮಣ್ಯ ಹೊಳ್ಳ ನಿಧನ

0

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇದರ ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷ, ಉಪ್ಪಿನಂಗಡಿ ಗ್ರಾಮದ ಅರ್ತಿಲ ನಿವಾಸಿ ಬಾಲಸುಬ್ರಹ್ಮಣ್ಯ ಹೊಳ್ಳ (60 ವ.) ನ. 22ರಂದು ಮಂಗಳೂರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪ್ರಗತಿಪರ ಕೃಷಿಕರಾಗಿದ್ದ ಬಾಲಸುಬ್ರಹ್ಮಣ್ಯರವರು ಅತ್ಯಂತ ಸರಳ ವ್ಯಕ್ತಿಯಾಗಿದ್ದರು. ಮತ್ತು ಹೋರಾಟ ಗುಣವನ್ನು ಮೈಗೂಡಿಸಿಕೊಂಡಿದ್ದರು. ರೈತ ಸಂಘ ಮತ್ತು ಹಸಿರು ಸೇನೆಯ ಮೂಲಕ ಅನ್ಯಾಯದ ವಿರುದ್ಧ ನಡೆಯುವ ಪ್ರತಿಭಟನೆ ಮೊದಲಾದ ಕಾರ‍್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದು, ಚಿರಪರಿಚಿತರಾಗಿದ್ದರು.

ಮೃತರ ನಿಧನದ ಸುದ್ದಿ ತಿಳಿಯುತ್ತಿದಂತೆ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆ ಮತ್ತು ವಿವಿಧ ರಾಜಕೀಯ ಪಕ್ಷದ ಮುಖಂಡರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಮೃತರು ಪತ್ನಿ ರಾಜೇಶ್ವರ, ಪುತ್ರರಾದ ಅಶ್ವಥ್ ನಾರಾಯಣ, ಶಿವಪ್ರಸಾದ್, ಪುತ್ರಿ ಕನಕಲಕ್ಷ್ಮಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here