ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಿನ್ನೆಲೆ ವಿಟ್ಲದ ಗುರ್ಮೆ ತರವಾಡ್ ವಲಯ ಸಮಿತಿ ರಚನೆ

0

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳ 05ರಿಂದ 10ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ಕೃಷ್ಣಪ್ಪ ಗೌಡ ಗುರ್ಮೆ ರವರ ಅಧ್ಯಕ್ಷತೆಯಲ್ಲಿ ಗುರ್ಮೆ ತರವಾಡ್ ವಲಯ ಸಮಿತಿಯ ರಚನೆಯ ಸಭೆ ನಡೆಸಲಾಯಿತು.


ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸಹಕರಿಸುವಂತೆ ಈ ವಲಯದ ಜನರು ಸಹಕರಿಸಬೇಕೆಂದು ಕುಕ್ಕಾಜೆ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ವಿನಂತಿಸಿದರು.

ಹರೀಶ್, ಜಯರಾಮ, ಗಂಗಾಧರ ಗೌಡ, ತಿಮ್ಮಪ್ಪ ಗೌಡ,ಹಾಗೂ ಕುಕ್ಕಾಜೆ ಕ್ಷೇತ್ರದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಗುರ್ಮೆ ವಲಯ ಸಮಿತಿಯನ್ನು ರಚಿಸಲಾಯಿತು

ಅಧ್ಯಕ್ಷರಾಗಿ ಕೃಷ್ಣಪ್ಪ ಗೌಡ,‌ಉಪಾಧ್ಯರಾಗಿ ಗಂಗಾಧರ ಗೌಡ, ಕಾರ್ಯದರ್ಶಿ ಯಾಗಿಹರೀಶ್, ಜತೆ ಕಾರ್ಯದರ್ಶಿಯಾಗಿ ಜಯರಾಮ್,
ಕಾರ್ಯಕಾರಿ ಸದಸ್ಯರಾಗಿ ತಿಮ್ಮಪ್ಪ ಗೌಡ, ವಾಸು ಗೌಡ, ಜೊಳಿಯಪ್ಪ ಗೌಡ, ಪೂವಪ್ಪ ಗೌಡ, ಜಗನ್ನಾಥ ಗೌಡ, ಸೇಸಪ್ಪ ಗೌಡ, ಆನಂದ ಗೌಡ,ಶ್ರೀಧರ ಗೌಡ, ಬಾಸ್ಕರ ಗೌಡ,ಶ್ರೀನಿವಾಸ ಗೌಡಹಾಗೂ ಸುಮಾರು 25 ಮಂದಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಹರೀಶ್ ಗುರ್ಮೆ ಸ್ವಾಗತಿಸಿ, ಸತ್ಯ ಪ್ರಸಾದ್ ಕುಕ್ಕಾಜೆ ವಂದಿಸಿದರು.

LEAVE A REPLY

Please enter your comment!
Please enter your name here