ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶ್ರೀ ಸತ್ಯಸಾಯಿ ಬಾಬಾ ಜಯಂತಿ

0

ಪುತ್ತೂರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಭಗವಾನ್ ಶ್ರೀಸತ್ಯಸಾಯಿ ಬಾಬಾರವರ 97 ನೇ ಜಯಂತಿ ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್, ಸಂಚಾಲಕರ ಮಾತೃಶ್ರೀ ಸುಮಿತ್ರಾ ಆಚಾರ್, ಕೋಟೆಚಾ ಹಾಲ್‌ನ ಮಾಲಕ ಶಶಾಂಕ್ ಕೋಟೆಚಾ, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಶಾಲಾ ಸದಸ್ಯ ಪ್ರಸನ್ನ ಎನ್. ಭಟ್, ಅಶೋಕ್ ಕುಮಾರ್ ಪುತ್ತಿಲ ಉಪಸ್ಥಿತರಿದ್ದರು.

ಸನ್ಮಾನ : ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್‌ನಿಂದ ಬಿಜಾಪುರದಲ್ಲಿ ನಡೆದ ೩ನೇ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಸಿಂಗಲ್ ವಿಭಾಗದಲ್ಲಿ ಪ್ರಥಮ ಸ್ಥಾನ, ಟ್ರೆಡಿಶನಲ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಹತ್ತನೇ ತರಗತಿಯ ವಿದ್ಯಾರ್ಥಿ ನಿಖಿಲ್ ಏ., ಹತ್ತನೇ ತರಗತಿಯ ವಿದ್ಯಾರ್ಥಿಗಳ ಸರ್ವಾಂಗೀಣ ಚಟುವಟಿಕೆಗಳಿಗೆ ಹಾಗೂ ದೀಪಾವಳಿ ಪ್ರಯುಕ್ತ ನಡೆಸಲಾದ ಗೂಡು ದೀಪ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯಗುರು ಜಯಮಾಲಾ ವಿ.ಎನ್ ಸ್ವಾಗತಿಸಿದರು. ಸುಕನ್ಯ ವಂದಿಸಿದರು. ಮುರಳಿಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಸಾಯಿಭಕ್ತರಾದ ಕಾಂಚನ, ಸೂರ್ಯನಾರಾಯಣ ದಾಳಿಂಬ, ಗೋಪಾಲಕೃಷ್ಣ ಕಡಂಬಳಿತಾಯ, ಸುಜಾತ ಆಚಾರ್, ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here