ಕೊಳ್ತಿಗೆ ಗ್ರಾಮದ ಪಾಂಬಾರ್‌ಗೆ ಬಸ್ಸು ಸಂಪರ್ಕ ಕಲ್ಪಿಸಲು ಕೆಎಸ್‌ಆರ್‌ಟಿಸಿಗೆ ಮನವಿ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಂಬಾರ್‌ಗೆ ಬಸ್ ವ್ಯವಸ್ಥೆ ಮಾಡಬೇಕು ಮತ್ತು ಗ್ರಾಮದ ಬಸ್ ವ್ಯವಸ್ಥೆಯನ್ನು ಸರಿ ಮಾಡಿಕೊಡಬೇಕು ಎಂದು ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ ಇಸ್ಮಾಯಿಲ್‌ರವರಿಗೆ ಮನವಿಯನ್ನ ಕೊಳ್ತಿಗೆ ಗ್ರಾಮ ಪಂಚಾಯತ್ ಸದಸ್ಯರಿಂದ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೊಳ್ತಿಗೆ ಗ್ರಾಮ ಪಂಚಾಯಿತ್ ಸದಸ್ಯರುಗಳಾದ ವಸಂತ ರೈ ದುಗ್ಗಳ, ಪ್ರಮೋದ್ ಕೆ.ಎಸ್, ಪವನ್ ದೊಡ್ಡಮನೆ, ಕೊಳ್ತಿಗೆ ಸಿಎ ಬ್ಯಾಂಕ್ ಮಾಜಿ ನಿರ್ದೇಶಕ ಯಶೋಧರ ಪಾಂಬಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇಸ್ಮಾಯಿಲ್‌ರವರು ಮನವಿಯ ಬಗ್ಗೆ ಪರಿಶೀಲನೆ ನಡೆಸಿ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದರು.

LEAVE A REPLY

Please enter your comment!
Please enter your name here