ಪುತ್ತೂರು:ತನ್ನ 75 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯ ಸಭಾ ಸದಸ್ಯರಾಗಿರುವ ಡಾ. ಡಿ. ವಿರೇಂದ್ರ ಹೆಗ್ಗಡೆಯವರನ್ನು ನ.25 ರಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನ ವತಿಯಿಂದ ಹೆಗ್ಗಡೆಯವರನ್ನು ಗೌರವಿಸಿದರು.
ಹೆಗ್ಗಡೆಯವರ ಹುಟ್ಟು ಹಬ್ಬದ ಅಂಗವಾಗಿ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ಸೇವೆ ನೆರವೇರಿಸಿ, ಅದರ ಪ್ರಸಾದವನ್ನು ಹೆಗ್ಗಡೆಯವರಿಗೆ ಸಮರ್ಪಿಸಿ, ಹೆಗ್ಗಡೆಯವರಿಗೆ ಹಾರಾರ್ಪಣೆ ಮಾಡಿ, ಫಲಪುಷ್ಪ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ರೋಯಲ್ ಸೌಹಾರ್ದ ಸಹಕಾರಿ ಅಧ್ಯಕ್ಷ ದಂಬೆಕಾನ ಸದಾಶಿವ ರೈಯವರು ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಹಿನ್ನೆಲೆಯಲ್ಲಿ ಹೆಗ್ಗಡೆಯವರನ್ನು ಭೇಟಿಯಾಗಿ ಅವರಿಗೆ ಫಲ, ಪುಷ್ಪ ಸಮರ್ಪಿಸಿ ಅವರ ಆಶೀರ್ವಾದ ಪಡೆದರು.
ಪುತ್ತೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ರೋಯಲ್ ಸೌಹಾರ್ಧ ಸಹಕಾರಿಯ ಉಪಾಧ್ಯಕ್ಷ ಎ.ಕೆ ಜಯರಾಮ ರೈ, ನಿರ್ದೇಶಕ ಆನಂದ ರೈ ಕೆಯ್ಯೂರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಕೆ. ಆನಂದ ಉಪಸ್ಥಿತರಿದ್ದರು.