ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಸತ್ಯನಾರಾಯಣ ಪೂಜೆ

0

ಪುತ್ತೂರು: ಸಮುದಾಯದ ಸಂಘಟನೆ ಸೌಹಾರ್ದಕ್ಕಾಗಿ ಎಂಬ ಗುರಿಯಿಟ್ಟುಕೊಂಡು ಎಲ್ಲಾ ಸಮಾಜದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನ.27ರಂದು ತೆಂಕಿಲ ಒಕ್ಕಲಿಗನಗರದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ವಾರ್ಷಿಕ ಸಮಾವೇಶದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.


ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ ದಂಪತಿ ಪೂಜೆಯಲ್ಲಿ ಭಾಗವಹಿಸಿ ವೃತಾಚರಣೆ ಕೈಗೊಂಡರು. ಈ ಸಂದರ್ಭದಲ್ಲಿ ಒಕ್ಕಲಿಗ ಮಹಿಳಾ ಗೌಡ ಸಂಘದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಕೊಳಲು ವಾದಕ ಲಿಂಗಪ್ಪ ಗೌಡ ತೆಂಕಿಲ ಅವರು ಹಾರ್ಮೋನಿಯಂನಲ್ಲಿ ಸಹಕರಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಸಲಹಾ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ ಸಹಿತ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಅವರ ನೇತೃತ್ವದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಪ್ರಸಾದ ವಿತರಣೆ ಕಾರ್ಯ ನೆರವೇರಿಸಿದರು.

LEAVE A REPLY

Please enter your comment!
Please enter your name here