ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಅನಘ ಕೆ.ಎ.ಗೆ 2 ಚಿನ್ನದ ಪದಕ

0

ಪುತ್ತೂರು: ಹರಿಯಾಣದ ಕುರುಕ್ಷೇತ್ರ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ವಿದ್ಯಾಭಾರತಿ ವತಿಯಿಂದ ನ.19ರಿಂದ 23ರವರೆಗೆ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರು ತೆಂಕಿಲದ ಅನಘ ಕೆ.ಎ.ರವರು 100 ಮೀಟರ್ ಹರ್ಡಲ್ಸ್‌ನಲ್ಲಿ ಚಿನ್ನ, 400 ಮೀಟರ್ ಹರ್ಡಲ್ಸ್‌ನಲ್ಲಿ ಚಿನ್ನ, 400 ಮೀಟರ್ ಓಟದಲ್ಲಿ ಕಂಚು ಮತ್ತು 4*100 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎ.ರವರು ಪ್ರಸ್ತುತ ಮಂಗಳೂರು ಕೊಡಿಯಾಲ್‌ಬೈಲ್ ಶಾರದಾ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾರೆ. ತೆಂಕಿಲ ನಿವಾಸಿಗಳಾದ ಅನಿಲ್ ಕುಮಾರ್ ಮತ್ತು ಕವಿತಾ ಅನಿಲ್‌ರವರ ಪುತ್ರಿಯಾಗಿರುವ ಅನಘರವರಿಗೆ ಮಂಗಳೂರಿನ ತರಬೇತುದಾರ ದಿನೇಶ್ ಕುಂದರ್ ತರಬೇತಿ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here