ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ-ದೇವರ ದರ್ಶನ ಬಲಿ

0

ಪುತ್ತೂರು; ಇತಿಹಾಸ ಪ್ರಸಿದ್ದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಡಿ.9ರ ಷಷ್ಠಿಯಂದು ಷಷ್ಠಿಮಹೋತ್ಸವ, ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.


ಬೆಳಿಗ್ಗೆ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ರಾಜಾಂಗಣದಲ್ಲಿ ಬಟ್ಟಲು ಕಾಣಿಕೆ ನಡೆಯಿತು. ನಂತರ ಕೆಮ್ಮಿಂಜೆ ಗ್ರಾಮ ದೈವ ಶಿರಾಡಿ ದೈವದ ಕಿರುವಾಳು ಬೀಳ್ಕೊಡುಗೆ ನಡೆದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ವಿಶೇಷವಾಗಿ ಮಧ್ಯಾಹ್ನ ಷಷ್ಠಿ ವೃತಧಾರಿಗಳಿಗೆ ಅನ್ನದಾನವು ಪ್ರತ್ಯೇಕವಾಗಿ ವ್ಯವಸ್ಥಿತ ರೀತಿಯಲ್ಲಿ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆದು ರಂಗಪೂಜೆ ವೈದಿಕ ಮಂತ್ರಾಕ್ಷತೆ ನಡೆಯಿತು. ಊರ, ಪರವೂರ ಸಾವಿರಾರು ಮಂದಿ ಭಕ್ತಾದಿಗಳು ಷಷ್ಠಿ ಮಹೋತ್ಸವದಲ್ಲಿ ಭಾಗವಹಿಸಿ, ದೇವರ ವೈಭವದ ಜಾತ್ರೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.

LEAVE A REPLY

Please enter your comment!
Please enter your name here