ಪುತ್ತೂರು, ಉಪ್ಪಿನಂಗಡಿ ಸಹಿತ ಹಲವು ಯಕ್ಷಗಾನ ಕಲಾ ಸಂಘಕ್ಕೆ ಯಕ್ಷಗಾನ ಪರಿಕರಗಳನ್ನು ನೀಡಿದ್ದ ಕುಂಬ್ಳೆ ಸುಂದರ ರಾವ್ ನಿಧನ

0

ಪುತ್ತೂರು: ಪುತ್ತೂರು ಮತ್ತು ಉಪ್ಪಿನಂಗಡಿ ಸಹಿತ ಹಲವು ಯಕ್ಷಗಾನ ಕಲಾ ಸಂಘಕ್ಕೆ ಯಕ್ಷಗಾನಕ್ಕೆ ಸಂಬಂಧಿಸಿದ ಪರಿಕರಗಳನ್ನು ಪೂರೈಸಿದ್ದ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಕುಂಬ್ಳೆ ಸುಂದರ ರಾವ್ ನ.30 ರಂದು ನಿಧನರಾದರು.


ಪುತ್ತೂರು ಆಂಜನೇಯ ಯಕ್ಷಗಾನ ಕಲಾ ಸಂಘದಿಂದು ಯಕ್ಷಾಂಜನೇಯ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಸಂದರ್ಭ ಅವರು ಪುತ್ತೂರು ಆಂಜನೇಯ ಯಕ್ಷಗಾನ ಕಲಾ ಸಂಘಕ್ಕೆ ಚೆಂಡೆ ಖರೀದಿಸಲು ಆರ್ಥಿಕ ನೆರವು ನೀಡಿದ್ದರು. ಅದೇ ರೀತಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸಂಘಕ್ಕೆ ಅಕಾಡೆಮಿಗೆ ಹಿಮ್ಮೇಳ ಪರಿಕರಗಳಿಗಾಗಿ ಆರ್ಥಿಕ ನೆರವನ್ನು ನೀಡಿದ್ದರು ಎಂದು ಪುತ್ತೂರು ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಮತ್ತು ಉಪ್ಪಿನಂಗಡಿಯ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here