ಕೆಮ್ಮಿಂಜೆ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ `ಷಷ್ಠಿ ಮಹೋತ್ಸವ’ ಸಂಪನ್ನ

0

ಪುತ್ತೂರು; ತುಳುನಾಡಿನ ಪುರಾತನ ಕಾರಣಿಕ ಕ್ಷೇತ್ರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಷಷ್ಠಿ ಮಹೋತ್ಸವವು ನ.30ರಂದು ಬೆಳಿಗ್ಗೆ ಪಂಚವಿಂಶತಿ ಕಲಶಪೂಜೆ, ಶ್ರೀದೇವರಿಗೆ ಸೀಯಾಳಾಭಿಷೇಕ, ಸಂಪ್ರೋಕ್ಷಣಾ ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆಯೊಂದಿಗೆ ಸಂಪನ್ನಗೊಂಡಿತು.


ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಷಷ್ಠಿ ಮಹೋತ್ಸವದಲ್ಲಿ ನ.26ರಂದು ಸಂಜೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದಶುದ್ಧಿ, ರಕ್ಷೋಘ್ನಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ, ಮಹಾಪೂಜೆ, ನ.27ರ ಚೌತಿಯಂದು ಶ್ರೀ ದೇವರಿಗೆ ಪವಮಾನಾಭಿಷೇಕ, 6 ತೆಂಗಿನಕಾಯಿ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಪಂಚವಿಂಶತಿ ಕಲಶಪೂಜೆ, ದೇವರಿಗೆ ಕಲಶಾಭಿಷೇಕ, ಸಂಜೆ ಶ್ರೀರಾಮ ಭಜನಾ ಮಂಡಳಿ ಕೆಮ್ಮಿಂಜೆ ಹಾಗೂ ಬೊಳುವಾರು ವೈದೇಹಿ-ವೈಷ್ಣವಿ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ ದೇವರಿಗೆ ಕಾರ್ತಿಕ ಪೂಜೆ ನಡೆಯಿತು.

ನ.28ರ ಪಂಚಮಿಯಂದು ಬೆಳಿಗ್ಗೆ ಕೇತ್ರದ ನಾಗಬನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಮತ್ತು ನಾಗತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀದೇವರ ಬಲಿಹೊರಟು ಪಂಚಮಿ ಉತ್ಸವ ಪಲ್ಲಕಿ, ಉತ್ಸವ ಕಟ್ಟೆಪೂಜೆ, ರಾತ್ರಿ ಕೆಮ್ಮಿಂಜೆ ಗ್ರಾಮ ದೈವ ಶಿರಾಡಿ ದೈವದ ಕಿರುವಾಳು ಆಗಮನ ನಡೆಯಿತು.

ನ.29ರ ಷಷ್ಠಿಯಂದು ಬೆಳಿಗ್ಗೆ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಂಜೆ ದೈವಗಳ ಭಂಡಾರ ತೆಗೆದು ರಂಗಪೂಜೆ ವೈದಿಕ ಮಂತ್ರಾಕ್ಷತೆ ಹಾಗೂ ರಾತ್ರಿ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಿತು. ಊರ, ಪರವೂರಿನ ಸಹಸ್ರರಾರು ಮಂದಿ ಭಕ್ತಾದಿಗಳು ಜಾತ್ರೋತ್ಸವದಲ್ಲಿ ಪಾಲ್ಗೊಂಡು ಪುನಿತರಾರು.

LEAVE A REPLY

Please enter your comment!
Please enter your name here