ಕಂದಾಯ ಇಲಾಖೆಯ ನಾಗೇಶ್‌ರವರಿಗೆ ಬೀಳ್ಕೊಡುಗೆ

0

ಪುತ್ತೂರು: ಕಂದಾಯ ಇಲಾಖೆಯ ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ನಾಗೇಶ್‌ರವರಿಗೆ ಬೀಳ್ಕೊಡುಗೆ ಸಮಾರಂಭವು ನ.30 ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಸಹಾಯಕ ಆಯುಕ್ತ ಗಿರೀಶ್ ನಂದನ್ ನಿವೃತ್ತರನ್ನು ಸನ್ಮಾನಿಸಿ, ಗೌರವಿಸಿದರು. ಬಳಿಕ ಮಾತನಾಡಿದ ಅವರು ಇಲಾಖೆಯಲ್ಲಿ ನಾಗೇಶ್‌ರವರ ಪ್ರಾಮಾಣಿಕತೆ, ನಿಷ್ಠೆಯ ಕಾರ್ಯವೈಖರಿಯ ಬಗ್ಗೆ ವಿವರಿಸಿದರು. ಸನ್ಮಾನ ಸ್ವೀಕರಿಸಿದ ನಾಗೇಶ್‌ರವರು ಮಾತನಾಡಿ, ತನ್ನ ಸೇವಾವಧಿಯಲ್ಲಿ ಸಹಕರಿಸಿದರವರಿಗೆ ಕೃತಜ್ಞತೆ ಸಲ್ಲಿಸಿದರು. ತಹಶೀಲ್ದಾರ್ ನಿಸರ್ಗಪ್ರಿಯ ಜೆ., ಗ್ರೇಡ್-2 ತಹಶೀಲ್ದಾರ್ ಲೋಕೇಶ್ ಬಿ.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪುತ್ತೂರು ತಾಲೂಕು ಕಂದಾಯ ಇಲಾಕೆ, ತಾಲೂಕು ಗ್ರಾಮ ಸಹಾಯಕರ ಸಂಘ, ಬಂಟ್ವಾಳ ತಾಲೂಕು ಚುನಾವಣಾ ಶಾಖೆ, ಕಡಬ ತಾಲೂಕು ಚುನಾವಣಾ ಶಾಖೆ, ಸುಳ್ಯ ತಾಲೂಕು ಚುನಾವಣಾ ಶಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಿವೃತ್ತರನ್ನು ಸನ್ಮಾನಿಸಿ ಗೌರವಿಸಿದರು.
ತಾಲೂಕು ಕಚೇರಿ ವಿಷಯ ನಿರ್ವಾಹಕ ಡಿ.ಟಿ ದಯಾನಂದ ಸ್ವಾಗತಿಸಿ, ವಂದಿಸಿದರು. ಉಪತಹಶೀಲ್ದಾರ್ ಸುಲೋಚನಾ ಪಿ.ಕೆ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here