ಪ್ರಮೋದ್ ಮುತಾಲಿಕ್‌ಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣ: ಪುತ್ತೂರಿನ ಆಸೀಫ್ ವಿರುದ್ಧ ದೂರು ದಾಖಲಿಸಲು ಕೋರ್ಟ್ ಅನುಮತಿ

0

ಪುತ್ತೂರು: ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆಯೊಡ್ಡಿದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ.


ಪ್ರಮೋದ್ ಮುತಾಲಿಕ್ ಅವರು ತಮಗೆ ಮೊಬೈಲ್ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ ವ್ಯಕ್ತಿಯ ವಿರುದ್ಧ ಧಾರವಾಡ ಉಪನಗರ ಠಾಣೆಗೆ ದೂರು ನೀಡಿದ್ದರು. ಈ ವ್ಯಕ್ತಿಯ ಪತ್ತೆಗೆ ಕೋರ್ಟ್ ಅನುಮತಿ ಬೇಕಾಗಿದ್ದರಿಂದ ನ್ಯಾಯಾಲಯದ ಅನುಮತಿ ಪಡೆದಿರುವ ಪ್ರಮೋದ್ ಮುತಾಲಿಕ್ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಶೀಘ್ರ ಪತ್ತೆ ಮಾಡಲು ಪೊಲೀಸರಿಗೆ ಮನವಿ ಮಾಡಿದ್ದಾರೆ.
ತಮಗೆ ಬೆದರಿಕೆಯೊಡ್ಡಿದ ಆ ವ್ಯಕ್ತಿ ಪುತ್ತೂರಿನ ಆಸಿಫ್ ಎಂದು ಗೊತ್ತಾಗಿದೆ. ಈಗಾಗಲೇ ನ್ಯಾಯಾಲಯ ಈ ಸಂಬಂಧ ಎಫ್‌ಐಆರ್ ಮಾಡಿ ತನಿಖೆ ನಡೆಸಲು ಅನುಮತಿ ನೀಡಿದೆ. ಇನ್ನು ಮುಂದೆ ಪೊಲೀಸರು ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here