ಫಿಲೋಮಿನಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಆನಂದಾಶ್ರಮಕ್ಕೆ ಭೇಟಿ

0

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರೆಡ್ ಕ್ರಾಸ್ ಸೊಸೈಟಿಯ ವಿದ್ಯಾರ್ಥಿಗಳು ಮುಕ್ರಂಪಾಡಿ ಆನಂದಾಶ್ರಮಕ್ಕೆ ಭೇಟಿ ನೀಡಿ, ಆಶ್ರಮದಲ್ಲಿನ ಹಿರಿಯರೊಂದಿಗೆ ಕುಶಲೋಪರಿ ನಡೆಸಿದರು.


ಸುಮಾರು 40 ವಿದ್ಯಾರ್ಥಿ-ವಿದ್ಯಾರ್ಥಿನಿಯರ ತಂಡವು ಆಶ್ರಮದಲ್ಲಿ ವಿವಿಧ ಮನರಂಜನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆಶ್ರಮದಲ್ಲಿನ ಹಿರಿಯರನ್ನು ಸಂತೋಷಪಡಿಸಿ, ಹಣ್ಣುಹಂಪಲುಗಳನ್ನು ವಿತರಿಸಿದರು. ರೆಡ್ ಕ್ರಾಸ್ ಸೊಸೈಟಿಯ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ರೆಡ್ ಕ್ರಾಸ್ ಸೊಸೈಟಿ ನಿರ್ದೇಶಕಿ ಜ್ಯೋತಿ ಹಾಗೂ ಉಪನ್ಯಾಸಕ ಭರತ್ ಕುಮಾರ್ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಆನಂದಾಶ್ರಮದ ಸೂಪರ್ ವೈಸರ್ ಮೀನಾಕ್ಷಿರವರು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು

LEAVE A REPLY

Please enter your comment!
Please enter your name here