ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ಇಂಟರ್ ಲಾಕ್ ಉದ್ಘಾಟನೆ, ಶಾಸಕರಿಗೆ ಸನ್ಮಾನ

0

ಪುತ್ತೂರು: ದ.20ರಿಂದ 25ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿರುವ 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಅಂಗಣಕ್ಕೆ ಹಾಕಲಾಗಿರುವ ಇಂಟರ್ ಲಾಕ್ ಉದ್ಘಾಟನೆ ಮತ್ತು ಇಂಟರ್ ಲಾಕ್ ಅಳವಡಿಕೆಗೆ 15 ಲಕ್ಷ ರೂ ಅನುದಾನ ಒದಗಿಸಿದ ಶಾಸಕ ಸಂಜೀವ ಮಠಂದೂರುರವರಿಗೆ ಅಭಿನಂದನಾ ಕಾರ್ಯಕ್ರಮ ದ.4ರಂದು ದೇವಸ್ಥಾನದ ಆವರಣದಲ್ಲಿ ನಡೆಯಿತು. ಉದ್ಘಾಟನೆ ನೆರವೇರಿಸಿದ ಬಳಿಕ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು ದೇವಸ್ಥಾನಗಳಿಗೆ ಒದಗಿಸಿ ಕೊಟ್ಟ ಅನುದಾನ, ರಸ್ತೆ ಅಭಿವೃದ್ಧಿ ಕೆಲಸಗಳು, ಕುಡಿಯುವ ನೀರಿನ ಯೋಜನೆ ಮತ್ತು ಇನ್ನಿತರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇಂಟರ್ ಲಾಕ್ ಕಾಮಗಾರಿ ನಡೆಸಿಕೊಟ್ಟ ಗುತ್ತಿಗೆದಾರ ಕೃಷ್ಣ ಕುಮಾರ್ ರೈ ಕೆದಂಬಾಡಿ ಗುತ್ತುರವರಿಗೆ ಕಾರ್ಯಕ್ರಮದಲ್ಲಿ ಗೌರವಾರ್ಪಣೆ ಸಲ್ಲಿಸಲಾಯಿತು. ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಯನ್, ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ ಮತ್ತು ದೇವಳದ ಹಿರಿಯ ಮೊಕ್ತೇಸರ ಪುರುಷೋತ್ತಮ ಪ್ರಭು ಹನಂಗೂರು ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮೊಕ್ತೇಸರ ಯು.ಜಿ.ರಾಧ ಸ್ವಾಗತಿಸಿ, ಮೊಕ್ತೇಸರ ರಾಜೇಶ್ ವಂದಿಸಿದರು.‌ ಭರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here