ಡಿ.8: ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯ 5ನೇ ಶಾಖೆಯ ಉದ್ಘಾಟನೆ

0

ಪುತ್ತೂರು: ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿಯ 5 ನೇ ಶಾಖೆಯು ಸುಳ್ಯದ ಮುಖ್ಯ ರಸ್ತೆಯಲ್ಲಿರುವ ರಾಜಾರಾಮ್ ಕಾಂಪ್ಲೆಕ್ಸ್ ನಲ್ಲಿ ಡಿ.8 ರಂದು ಶುಭಾರಂಭಗೊಳ್ಳಲಿದೆ.

ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಕಳೆದ ೨೧ ವರ್ಷಗಳಿಂದ ವ್ಯವಹಾರ ನಡೆಸಿಕೊಂಡು ಬರುತ್ತಿದ್ದು 4 ಶಾಖೆಗಳನ್ನು ಹೊಂದಿದೆ. ಪ್ರಧಾನ ಕಚೇರಿಪುತ್ತೂರಿನಲ್ಲಿ ವ್ಯವಹರಿಸುತ್ತಿದೆ. ಮಂಗಳೂರು, ಕಡಬ, ಕೊಕ್ಕಡದಲ್ಲಿ ಶಾಖೆಯಿದ್ದು 5 ನೇ ಶಾಖೆಯನ್ನು ಸುಳ್ಯದಲ್ಲಿ ಪ್ರಾರಂಭಿಸುತ್ತಿದ್ದೆವೆ. ಅಡಿಟ್ ವರ್ಗೀಕರಣದಲ್ಲಿ ಎ ತರಗತಿ ಹೊಂದಿದ್ದು ವರ್ಷದಿಂದ ವರ್ಷಕ್ಕೆ ಪ್ರಗತಿ ಪಥವನ್ನು ಮುಂದುವರಿಸಿಕೊಂಡು ಬಂದಿರುವುದಾಗಿ ತಿಳಿಸಿದರು.

ಉದ್ಘಾಟನಾ ಸಮಾರಂಭವು ಬೆಳಗ್ಗೆ ಗಂಟೆ 9.೦೦ ಕ್ಕೆ ನಡೆಯಲಿದ್ದು, ಮೀನುಗಾರಿಕೆ ಬಂದರು ಒಳನಾಡು ಜಲ ಸಾರಿಗೆ ಸಚಿವರು,ಸುಳ್ಯ ಶಾಸಕರಾದ ಎಸ್. ಅಂಗಾರ ರವರು ಉದ್ಘಾಟಿಸಲಿದ್ದಾರೆ. ಪರಿವಾರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಬ್ಯಾಗತರಾಗಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಆದರ್ಶ ವಿವಿಧೋದ್ದೆಶ ಸಹಕಾರ ಸಂಘದ ಅಧ್ಯಕ್ಷ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ,ದ.ಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಹೆಚ್. ಎನ್ ರಮೇಶ್, ಹಿರಿಯ ಸಹಕಾರಿಗಳು ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಪಿ.ಬಿ ದಿವಾಕರ ರೈ ಪೆರಾಜೆ, ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಸುಳ್ಯ ತಾಲೂಕು ಮಹಿಳಾ ವಿವಿಧೋದ್ದೆಶ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ ರೈ ಬೆಳ್ಳಾರೆ, ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೆಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಮ್, ಉದ್ಯಮಿ ಲಯನ್ಸ್ ಕ್ಲಬ್ ಮಾಜಿ ಗವರ್ನರ್ ಎಂ.ಬಿ .ಸದಾಶಿವ, ಅಲ್ಪಸಂಖ್ಯಾತರ ವಿವಿಧೋದ್ದೆಶ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎಂ. ಬಾಪು ಸಾಹೇಬ್, ಸುಳ್ಯ ಎ.ಪಿ.ಎಂ.ಸಿ ಮಾಜಿ ನಿರ್ದೇಶಕ ಹಾಜಿ ಎಸ್ ಆದಮ್ ಕುಂಞ ಕಮ್ಮಾಡಿ, ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುಧಾಕರ ಆಲೆಟ್ಟಿ, ಕಾಂಪ್ಲೆಕ್ಸ್ ಮಾಲಕ ಕೃಷ್ಣ ಕನ್ಸಲ್ಟಿಂಗ್ಸ್ ಇಂಜಿನಿಯರ್ ಕೃಷ್ಣರಾವ್ ನಾವೂರು, ಪರಿವಾರ ಬಂಟರ ಸಂಘ ಸುಳ್ಯ ವಲಯದ ಅಧ್ಯಕ್ಷ ಪಿ.ಕೆ ವಿಠಲ ನಾಯ್ಕ್ ದೋಣಿ ಮೂಲೆ ಉಪಸ್ಥಿತರಿರುತ್ತಾರೆ ಎಂದು ನಿರ್ದೇಶಕ ರತ್ನಾಕರ ನಾಯ್ಕ್ ವಿವರ ನೀಡಿದರು.

ಬೆಳಗ್ಗೆ ಪುರೋಹಿತರ ನೇತೃತ್ವದಲ್ಲಿ ಗಣಪತಿ ಹವನವಾಗಿ ಬಳಿಕ ಕಚೇರಿಯ ಉದ್ಘಾಟನೆಯು ನಡೆಯಲಿದ್ದು ಸಭಾ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿಯ ಶಿವ ಕೃಪಾ ಕಲಾಮಂದಿರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಠೇವಣಿ ಪತ್ರಗಳ ಬಿಡುಗಡೆ, ಉಳಿತಾಯ ಖಾತೆಗಳ ಬಿಡುಗಡೆ, ಸಾಲ ಪತ್ರಗಳ ಬಿಡುಗಡೆಯನ್ನು ಅತಿಥಿಗಳು ನೆರವೇರಿಸಲಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸೀತಾರಾಮ ರೈ ಸವಣೂರು ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುವುದು. ಸಂಸ್ಥೆಯಲ್ಲಿ ಆಕರ್ಷಕ ಬಡ್ಡಿಯೊಂದಿಗೆ ವಿವಿಧ ಠೇವಣಿಗಳನ್ನು ಸ್ವೀಕರಿಸಲಾಗುವುದು. ಅಲ್ಲದೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳು ದೊರಕುವುದು.

ಕಳೆದ ಅವಧಿಯಲ್ಲಿ 2021- 22 ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಪುತ್ತೂರು ಕೇಂದ್ರ ಕಚೇರಿಯಲ್ಲಿ ಶೇ. 14% ಡಿವಿಡೆಂಡ್ ಸದಸ್ಯರಿಗೆ ವಿತರಿಸಲಾಗಿದೆ. ಪ್ರಸ್ತುತ ನಮ್ಮ ಸಂಸ್ಥೆಯಲ್ಲಿ ಒಟ್ಟು 118.39 ಕೋಟಿ ವ್ಯವಹಾರ ನಡೆಯುತ್ತಿದ್ದು 2021- 22ನೇ ಸಾಲಿನಲ್ಲಿ 45.93 ಲಕ್ಷ ಲಾಭಾಂಶ ಬಂದಿರುತ್ತದೆ ಎಂದು ಕೇಂದ್ರ ಕಚೇರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ.ಪಿ ಯವರು ವಿವರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ರಘುನಾಥ್ ನಾಯ್ಕ್, ಕೊಡಂಗೆ ಬಾಲಕೃಷ್ಣ ನಾಯ್ಕ್, ಸುಳ್ಯ ಸಲಹಾ ಸಮಿತಿ ಅಧ್ಯಕ್ಷ ಸತ್ಯಕುಮಾರ್ ಆಡಿಂಜ ಉಪಸ್ಥಿತರಿದ್ದರು.

ಳ್ಯ ಶಾಖೆಯ ಶುಭಾರಂಭದ ಪ್ರಯುಕ್ತ ಠೇವಣಿಗಳ ಮೇಲೆ ವಿಶೇಷವಾದ ಕೊಡುಗೆಗಳನ್ನು ನೀಡಲಾಗುತ್ತಿದೆ. ಡಿ. 31ರ ಒಳಗೆ ಒಂದು ವರ್ಷಕ್ಕೆ ಮೇಲ್ಪಟ್ಟ ಠೇವಣಿಗಳಿಗೆ ಶೇ 9% ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಶೇ. 9.5% ಬಡ್ಡಿ ನೀಡಲಾಗುವುದು.

LEAVE A REPLY

Please enter your comment!
Please enter your name here