ಕುರಿಯ ಶಾಲಾ ಹಿರಿಯ ವಿದ್ಯಾರ್ಥಿ ಸಂಘದಿಂದ 2 ನೇ ಹಂತದ ಸ್ವಚ್ಛತಾ ಅಭಿಯಾನ

0

ಪುತ್ತೂರು: ಕುರಿಯ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ 2ನೇ ಹಂತದ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಬೂಡಿಯರ್ ನಿಂದ ಕುರಿಯ ಉಳ್ಳಾಲ ದೇವಸ್ಥಾನದವರೆಗಿನ ಮಾರ್ಗದ ಬದಿಯಲ್ಲಿ ಬೆಳೆದು ನಿಂತ ಹುಲ್ಲು ಹಾಗೂ ಕಳೆಗಳನ್ನು ತೆಗೆಯಲಾಯಿತು.

ಸಂಘದ ಗೌರವಾಧ್ಯಕ್ಷ ಬೂಡಿಯರ್ ರಾಧಾಕೃಷ್ಣ ರೈ ಮತ್ತು ಸಂಘದ ಕಾರ್ಯಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲುಗುತ್ತುರವರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳು, ಕುರಿಯ ಗ್ರಾಮದ ನಾಗರಿಕರು ಪಾಲ್ಗೊಂಡಿದ್ದರು. ಸಂಘದ ಅಧ್ಯಕ್ಷ ಬೂಡಿಯಾರ್ ಗಣೇಶ್ ರೈ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here