ಜೀಪು ನಿಲ್ಲಿಸುತ್ತಿದ್ದ ವೇಳೆ ಹೃದಯಾಘಾತ-ಚಾಲಕ ಸಾವು

0

ಉಪ್ಪಿನಂಗಡಿ: ಜೀಪು ಚಲಾಯಿಸಿಕೊಂಡೇ ಬಂದ ವ್ಯಕ್ತಿಯೋರ್ವರು ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಕೊಯಿಲ ಗ್ರಾಮದ ಒಳಕಡಮ ನಿವಾಸಿ ವಿಶ್ವನಾಥ ಗೌಡ (50) ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ತಮ್ಮ ಜೀಪನ್ನು ದುರಸ್ತಿಗೊಳಪಡಿಸಿ, ಹೊಸದಾಗಿ ಬಣ್ಣ ಬಳಿದು, ಜೀಪಿನ ವಯರಿಂಗ್ ಬದಲಾಯಿಸಲು ಗ್ಯಾರೇಜೊಂದರಲ್ಲಿ ಮಾತುಕತೆ ನಡೆಸಿ ಉಪ್ಪಿನಂಗಡಿಯ ಖಾಸಗಿ ನರ್ಸಿಂಗ್ ಹೋಂ ಬಳಿ ಜೀಪನ್ನು ನಿಲ್ಲಿಸುತ್ತಿದ್ದಂತೆಯೇ ಹೃದಯ ಸ್ತಂಭನಕ್ಕೆ ತುತ್ತಾಗಿ ಜೀಪಿನಲ್ಲೇ ಮೃತಪಟ್ಟರು. ವಿಶ್ವನಾಥ ಗೌಡರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದರಾದರೂ ಆ ವೇಳೆಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here