ಆದಿಚುಂಚನಗಿರಿ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ 78ನೇ ಜಯಂತ್ಯೋತ್ಸವದ ಅಂಗವಾಗಿ ಪುತ್ತೂರಿನಲ್ಲಿ ಸಿದ್ದತಾ ಸಭೆ, ಆಮಂತ್ರಣ ಬಿಡುಗಡೆ

0

ಪುತ್ತೂರು: ಆದಿಚುಂಚನಗಿರಿಯ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ 78ನೇ ಜಯಂತ್ಯೋತ್ಸವಕ್ಕೆ ಭರದ ಸಿದ್ದತೆ ನಡೆಯುತ್ತಿದ್ದು ಡಿ.5ರಂದು ಸಂಜೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಿದ್ದತಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ‌ ನಡೆಯಿತು.


ಸಭೆಯಲ್ಲಿ ಸ್ವಾಮಿಜಿಯವರ 78ನೇ ಜಯಂತ್ಸೋತ್ಸವದ ಕಾರ್ಯಕ್ರಮಗಳ ರೂಪುರೇಷೆ ಗಳು, ಆಹ್ವಾನಿಸುವ ಅತಿಥಿಗಳು, ಆರ್ಥಿಕ‌ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಸ್ವಾಮೀಜಿಯವರ ಅಧ್ಯಯನ ಗ್ರಂಥ ಲೋಕಾರ್ಪಣೆ;

ಮಹಾಸ್ವಾಮಿ ಅವರ 78ನೇ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ  ಸ್ವಾಮೀಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಂಡಿಸಿರುವ ಮಹಾಪ್ರಬಂಧ ‘ಸಂಸ್ಕೃತ-ಸಂಸ್ಕೃತಿಗೆ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ’ ಒಂದು ಅಧ್ಯಯನ ಗ್ರಂಥವನ್ನು ಜಯಂತ್ಯೋತ್ಸವದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಧರ್ಮಪಾಲನಾಥ ಸ್ವಾಮಿಗಳು ಮಾಹಿತಿ ನೀಡಿದರು.

ಸಮುದಾಯದ ಸಹಕಾರ ಅಗತ್ಯ-ಧರ್ಮಪಾಲನಾಥ ಸ್ವಾಮಿಜಿ:

ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಾತನಾಡಿ, ಒಕ್ಕಲಿಗ ಸಮುದಾಯ ಈಗಾಗಲೇ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಅದ್ಧೂರಿ ಮೆರವಣಿಗೆ ಮೂಲಕ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಯಶಸ್ವಿಯಾಗಿ ಪ್ರತಿಷ್ಠಾಪಿಸಿದೆ. ಸ್ವತಂತ್ರ್ಯ ಹೋರಾಟಗಾರನಿಗೆ ಗೌರವ ನೀಡುವ ಮೂಲಕ ಇಡೀ ದೇಶವೇ ಕರಾವಳಿಯತ್ತ ತಿರುಗಿ ನೋಡುವಂತಹ ಕೆಲಸವನ್ನು ಮಾಡಿದ್ದೇವೆ. ಇದೀಗ ಸಮುದಾಯದ ಬಾಂಧವರು ಮಹಾಸ್ವಾಮಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮಕ್ಕೂ ದೊಡ್ಡ ಮಟ್ಟದ ಸಹಕಾರ ನೀಡಬೇಕು. ಜ.22ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಸಂಸ್ಮರಣ ಕಾರ್ಯಕ್ರಮದಲ್ಲಿ ಸಮುದಾಯ ಪ್ರತಿ ಮನೆಯಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.


ಎಲ್ಲ ರೀತಿಯಲ್ಲೂ ಸಹಕಾರ – ಮಠಂದೂರು:

ಬಾಲಗಂಗಾಧರನಾಥ ಸ್ವಾಮಿಯವರ 78ನೇ ಜಯಂತ್ಸೋತ್ಸವ ಮಾಡುವುದಕ್ಕೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವುದಾಗಿ ಶಾಸಕ ಸಂಜೀವ ಮಠಂದೂರು ಸಭೆಯಲ್ಲಿ ತಿಳಿಸಿದರು. ಸ್ವಾಮೀಜಿಯವರ ಜಯಂತ್ಸೋತ್ಸವದಲ್ಲಿ ಸಮುದಾಯದ ಪ್ರತಿಯೊಬ್ಬ ಮಂದಿಯೂ ಭಾಗವಹಿಸಬೇಕು. ಇದಕ್ಕಾಗಿ ಆಗಬೇಕಿರುವ ಮುಂದಿನ ಎಲ್ಲ ಕೆಲಸವನ್ನು ಒಟ್ಟು ಸೇರಿಕೊಂಡು ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸೋಣ ಎಂದು ತಿಳಿಸಿದರು.

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ , ಸುಳ್ಯ ತಾಲೂಕು ತರುಣ ಘಟಕ ಗೌಡರ ಯುವ ಸೇವ ಸಂಘ ಅಧ್ಯಕ್ಷ ರಜತ್ ಗೌಡ , ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ  ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ಕಡಬ ತಾಲೂಕು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಉಡುಪಿ ಜಿಲ್ಲಾ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ, ಡಾ. ಬಾಲಗಂಗಾಧರನಾಥ ಮಹಾಸ್ವಾಮಿ ಅವರ ೭೮ನೇ ಜಯಂತ್ಸೋತ್ಸವ ಸ್ವಾಗತ ಸಮಿತಿ ಸಂಚಾಲಕ ಚಿದಾನಂದ ಬೈಲಾಡಿ, ರಂಜನ್ ಗೌಡ ಬೆಳ್ತಂಗಡಿ, ಪುರುಷೋತ್ತಮ ಮುಂಗ್ಲಿಮನೆ, ಗೌರಿ ಬನ್ನೂರು ಸೇರಿದಂತೆ ಹಲವಾರು ಒಕ್ಕಲಿಗ ಸಂಘದ ನಾಯಕರು ಉಪಸ್ಥಿತರಿದ್ದರು

ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಉಡುಪಿ ಸೇರಿದಂತೆ ಕರಾವಳಿಯ ಹಲವು ಕಡೆಯಿಂದ ಗೌಡ ಸಮುದಾಯದ ನಾಯಕರು ಸಭೆಯಲ್ಲಿ ಪಾಲ್ಗೊಂಡು ಮುಂದಿನ ತಯಾರಿ ಬಗ್ಗೆ ಸಲಹೆ-ಸೂಚನೆ ನೀಡಿದರು.

LEAVE A REPLY

Please enter your comment!
Please enter your name here