ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಸಂಪನ್ನಗೊಂಡ ವಾರ್ಷಿಕ ಕ್ರೀಡಾಕೂಟ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರ ಸ್ಥ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟವು ಡಿ. 3 ರಂದು ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಳುಗಳ ಶಿಸ್ತುಬದ್ಧ ಆಕರ್ಷಕ ಪಥ ಸಂಚಲನದೂಂದಿಗೆ ಕ್ರೀಡಾಕೂಟವು ಉದ್ಘಾಟನೆಗೊಂಡಿದ್ದು, ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣಾ ರೈ ಬಿ ಇವರು ಗೌರವ ವಂದನೆಯನ್ನು ಸ್ವೀಕರಿಸಿ ವಿದ್ಯಾರ್ಥಿಗಳು ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಮೈಗೂಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಉತ್ತೇಜನ ನುಡಿಗಳನ್ನಾಡಿದರು.

ತ್ರೋಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದ ಕ್ರೀಡಾಳುಗಳು ಕ್ರೀಡಾ ಜ್ಯೋತಿಯನ್ನು ತಂದು ಮುಖ್ಯ ಅತಿಥಿಗಳಿಗೆ ಹ ಸ್ತಾಂತರಿಸಿದರು. ಶಾಲಾ ಕ್ರೀಡಾ ಸಚಿವ 10ನೇ ತರಗತಿಯ ಅನೂಪ್ ಶೆಣೈ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ  ಕರುಣಾಕರ ಸುವರ್ಣ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ  ಯು.ಜಿ ರಾಧಾ, ಮುಖ್ಯ ಶಿಕ್ಷಕಿ  ವೀಣಾ ಆರ್ ಪ್ರಸಾದ್, ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ  ವೀಣಾ ಆರ್ ಪ್ರಸಾದ್ ಸ್ವಾಗತಿಸಿ, ಸಹ ಶಿಕ್ಷಕಿಯರಾದ  ರಶ್ಮಿತ ಹಾಗೂದಿವ್ಯ ನಿರೂಪಿಸಿದರು.

LEAVE A REPLY

Please enter your comment!
Please enter your name here