ಬೊಬ್ಬೆಕೇರಿ ಶಾಲೆಯಲ್ಲಿ ಪೋಷಕರ, ಹಿರಿಯ ವಿದ್ಯಾರ್ಥಿಗಳ ಕ್ರೀಡೋತ್ಸವ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು.

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಸುಬ್ರಹ್ಮಂಯ ಉಪಾಧ್ಯಾಯ ಬೊಬ್ಬೆಕೇರಿ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ತೀರ್ಥಕುಮಾರ್ ಪೈಕ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು 6ನೇ ಜೆ.ಎಂ.ಎಫ್ ನ್ಯಾಯಾಲಯ ಸಹಕಾರ ಸರಕಾರಿ ವಕೀಲರಾದ ಜನಾರ್ದನ ಬಿ, ಬೆಳ್ಳಾರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಸ್ಟೇಬಲ್ ಚಂದ್ರಶೇಖರ್, ಕರಿಮಜಲು ಗ್ರಾಮ ದೈವಸ್ಥಾನದ ಅನುವಂಶೀಯ ಮೊಕ್ತೇಸರರಾದ ಪುಟ್ಟಣ್ಣ ಗೌಡ ಪೈಕ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಶಾಲಾ ಮುಖ್ಯಗುರು ಶಶಿಕಲಾ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಪುಣ್ಚತ್ತಾರು ಒಕ್ಕೂಟದ ಸೇವಾಪ್ರತಿನಿಧಿ ಮನೋರಮಾ, ಪುಣ್ಚತ್ತಾರು ಜುಮ್ಮಾ ಮಸೀದಿಯ ಅಧ್ಯಕ್ಷ ಶಾಕೀರ್ ಅಬ್ಬಡ, ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್ ನಾವೂರು, ಜತೆ ಕಾರ್ಯದರ್ಶಿ ಅಶ್ವಿನ್ ಕರಿಮಜಲು, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಕ್ರೀಡಾ ಸಂಚಾಲಕ ಗಿರೀಶ್ ಮಾಳ, ರವೀಂದ್ರ ಮಾಳ, ಪುನೀತ್ ಅಬ್ಬಡ ಹಾಗೂ ಶಿಕ್ಷಿಕಿಯರಾದ ಗೀತಾಕುಮಾರಿ, ದಿವ್ಯ, ಸುಶ್ಮಿತಾ, ಜಯಲತಾ ಉಪಸ್ಥಿತರಿದ್ದರು.

ಶಿಕ್ಷಕರಾದ ಜನಾರ್ದನ ಹೇಮಳ ಸ್ವಾಗತಿಸಿ, ಶ್ರುತಿ ವಂದಿಸಿದರು.

LEAVE A REPLY

Please enter your comment!
Please enter your name here