ಸರ್ವೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

0

ಪುತ್ತೂರು: ಸರ್ವೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.

ಶಾಲೆಯ ಮೇಲ್ಚಾವಣಿ ಹಾಗೂ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಡಾ ವೀರೇಂದ್ರ ಹೆಗ್ಗಡೆಯವರ ಜನ್ಮದಿನಾಚರಣೆಯ ಪ್ರಯುಕ್ತ ಈ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಕಮಲೇಶ್ ಸರ್ವೆದೋಳಗುತ್ತು, ಸಂಯೋಜಕರಾದ ಚಿತ್ರಾ ಆಚಾರ್ಯ, ಸದಸ್ಯರಾದ ಮೊಹಮ್ಮದ್ ಅಲಿ ನೇರೋಳ್ತಡ್ಕ, ಮನೋಜ್ ಸುವರ್ಣ ಸೊರಕೆ, ಮೋಹನ್ ಕಾಡಬಾಗಿಲು, ಧನಂಜಯ ಸರ್ವೆ, ನಾಗೇಶ್ ಪಟ್ಟೆಮಜಲು, ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಪಾಲ್ಗೊಂಡರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ತಂಡದ ಸದಸ್ಯರನ್ನು ಅಭಿನಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ಕಮಲ, ದೈ.ಶಿ.ಶಿಕ್ಷಕ ನವೀನ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here