ಡಿ.9, 10- ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವವು ಡಿ.9 ಮತ್ತು 10ರಂದು ನಡೆಯಲಿದೆ.

ಡಿ.9 ರಂದು ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಣ ಚಿಂತಕರು, ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ.ರಾಮಕುಂಜ, ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಸ್ಥಾಪಕಾಧ್ಯಕ್ಷ ಎಂಜೀರು ಪದ್ಮನಾಭ ರೈ, ಶಾಲಾ ಆಡಳಿತ ಸಮಿತಿ ಸದಸ್ಯರಾದ ಚಂದ್ರಹಾಸ ರೈ ಅಗಲ್ಪಾಡಿ, ನಾಗೇಶ್ ರೈ ಮಾಳ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಿ.10 ರಂದು ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿ ಅಧ್ಯಕ್ಷರು, ನಿವೃತ್ತ ಡಿವೈಎಸ್‌ಪಿ ಜಗನ್ನಾಥ ರೈ ನುಳಿಯಾಲುರವರು ವಹಿಸಲಿದ್ದು, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲರಾದ ಗಣರಾಜ ಕುಂಬ್ಳೆ, ಮಂಗಳೂರು ಕಣಚೂರು ವೈದ್ಯಕೀಯ ಕಾಲೇಜಿನ ಎಂ.ಡಿ ಡಾ| ವಿಶಾಲ್ ಯಂ.ಪಡೀಲ್, ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷ ಸಂಪತ್ ಕುಮಾರ್ ರೈ ಪಾತಾಜೆ, ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ವಿಶ್ವನಾಥ ರೈ ಮಾದೋಡಿ, ಸದಸ್ಯ ಉದಯ ರೈ ಮಾದೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಿ.9 ಮತು ಡಿ. 10 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, 2021-22 ನೇ ಸಾಲಿನ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಎಂದು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಎಂ.ಸರಸ್ವತಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here