ಬಿಯಂಎಸ್ ಆಟೋ ರಿಕ್ಷಾ ಚಾಲಕ, ಮಾಲಕರ ಸಂಘದ ಮಾಜಿ ಅಧ್ಯಕ್ಷರಿಗೆ ಹಲ್ಲೆ-ಆರೋಪಿಗೆ ಜಾಮೀನು

0

ಪುತ್ತೂರು:ಬಿಯಂಎಸ್ ಆಟೋ ರಿಕ್ಷಾ ಚಾಲಕ, ಮಾಲಕರ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ ನಾಯ್ಕ್ ಅವರ ರಿಕ್ಷಾಕ್ಕೆ ಬೈಕ್ ಅಡ್ಡ ಇಟ್ಟು ಹಲ್ಲೆ ನಡೆಸಿರುವ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.‌
ಭಾಸ್ಕರ್ ನಾಯ್ಕ್ ಅವರಿಗೆ ಸಂತೋಷ್ ಎಂಬವರು ಬೈಕ್ ಅಡ್ಡವಿಟ್ಟು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.‌ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಂತೋಷ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆರೋಪಿ ಪರ ವಕೀಲ ಕವನ್ ನಾಯ್ಕ್ ವಾದಿಸಿದ್ದರು.

LEAVE A REPLY

Please enter your comment!
Please enter your name here