ಕೆಪಿಎಸ್ ಕೆಯ್ಯೂರಿನಲ್ಲಿ ವಾರ್ಷಿಕೋತ್ಸವದ ಸಂಭ್ರಮ, ಪ್ರತಿಭಾ ಪುರಸ್ಕಾರ

0

ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ : ಸಂಜೀವ ಮಠಂದೂರು
ಕೆಯ್ಯೂರು: ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರಾಥಮಿಕ ವಿಭಾಗ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಾರ್ಷಿಕೋತ್ಸವವನ್ನು ದ.7ರಂದು ಆಚರಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ,  ವಿದ್ಯಾರ್ಥಿಗಳು  ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಗುರಿ ಇರಬೇಕು, ಇದಕ್ಕೆ ಪೂರಕವಾಗಿ ಶ್ರಮ ಅಗತ್ಯ, ಆಗ ನೀವು ಸಾಧಿಸಿದ ಗುರಿಯ ಕಡೆಗೆ ಇಡೀ  ಸಮಾಜವೇ ನಿಮ್ಮನ್ನು ಗುರುತಿಸಲ್ಪಡುತ್ತದೆ.  ಮಕ್ಕಳಿಗೆ ಹೆತ್ತವರ ಪ್ರೋತ್ಸಾಹ ಸಿಕ್ಕಾಗ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಾದ್ಯ. ಕೆಯ್ಯೂರಿನ ಈ ವಿದ್ಯಾಸಂಸ್ಥೆಯಲ್ಲಿ ಒಂದೇ ಸೂರಿನಡಿ ಎಲ್.ಕೆ.ಜಿ ಯಿಂದ ಪಿ.ಯು.ಸಿ.ವರೆಗಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.
ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ ಅದ್ಯಕ್ಷತೆ ವಹಿಸಿ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಿ, ಸರಕಾರಿ ಶಾಲೆಗಳು ಯಾವುದಕ್ಕೂ ಕಡಿಮೆಯಿಲ್ಲ. ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಲು ಮುಂದಾಗಬೇಕು. ಮಕ್ಕಳು ಕಲಿತು ಎಷ್ಟೇ ಉನ್ನತ ಹುದ್ದೆಗೇರಿದರೂ ಮೂಲವನ್ನು ಮರೆಯಬಾರದು ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಕೆಪಿಎಸ್ ಕೆಯ್ಯೂರು ಕಾಲೇಜು ಅಭಿವೃದ್ಧಿ ಸಮಿತಿ ನಿಕಟಪೂರ್ವ ಉಪಾಧ್ಯಕ್ಷ  ಶಶಿಧರ ರಾವ್ ಬೊಳಿಕ್ಕಳ, ಪ್ರೌಢಶಾಲಾ ಎಸ್ ಡಿ ಎಂ ಸಿ ನಿಕಟಪೂರ್ವ ಕಾರ್ಯಾಧ್ಯಕ್ಷ ಎಸ್.ಬಿ ಜಯರಾಮ ರೈ ಬಳಜ್ಜ, ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಕೆಯ್ಯೂರು ಅಧ್ಯಕ್ಷ ದಿನೇಶ್ ಕೆ.ಎಸ್, ಕೆ.ಪಿ.ಎಸ್ ಕೆಯ್ಯೂರು ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಚರಣ್ ಕುಮಾರ್ ಸಣಂಗಳ, ಕೆಪಿಎಸ್ ಕೆಯ್ಯೂರು ಪ್ರಾಂಶುಪಾಲ ಇಸ್ಮಾಯಿಲ್, ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ, ಪೂರ್ಣ ಹಾಜರಾತಿ ಪಡೆದವರಿಗೆ, ತರಗತಿವಾರು ಅತ್ಯುತ್ತಮ ಅಂಕ ಪಡೆದವರಿಗೆ ಬಹುಮಾನಗಳನ್ನು ನೀಡಲಾಯಿತು. ಕ್ರೀಡೆಯಲ್ಲಿನ ವೈಯಕ್ತಿಕ ಚಾಂಪಿಯನ್ ಗಳನ್ನು, ವಾರ್ಷಿಕ ಸಮಗ್ರ ಪ್ರಶಸ್ತಿ ಪಡೆದ ತಂಡಗಳನ್ನು, ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಿಸಿದ ತಂಡವನ್ನು, ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ವಿಶಿಷ್ಟ ಶ್ರೇಣಿ ಹಾಗೂ ಅತ್ಯಧಿಕ ಅಂಕ ಪಡೆದವರನ್ನು ಸನ್ಮಾನಿಸಲಾಯಿತು.  ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರ ವಿವರಗಳನ್ನು  ಶಿಕ್ಷಕರಾದ ನಳಿನಿ ಡಿ. ಸೆಲ್ವ ಜಸ್ಟ್ನ ಲೂಯಿಸ್, ಶೈಲಜಾ, ಅರ್ಚನಾ ರಾವ್ ಎ.ಎಚ್ ವರದಿ ವಾಚಿಸಿದರು.
ಕಾಲೇಜು ವಿಭಾಗದಿಂದ  ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ.ಪಿ ಕ್ರೀಡಾಕೂಟದ  ಸಾಧಕ ವಿದ್ಯಾರ್ಥಿಗಳ ಸನ್ಮಾನ ಹಾಗೂ ಸಮಗ್ರ ಪ್ರಶಸ್ತಿಗಳ ವಿವರಗಳನ್ನು ವಾಚಿಸಿದರು. ಶಿಕ್ಷಕರಾದ ಸೌಮ್ಯ ಶೆಟ್ಟಿ, ಸುಮಲತಾ.ಎನ್, ಮೋಲಿ ವಿಲಮ್ ಪಿಂಟೋ, ಪ್ರತೀಕ್ಷಾ ಎಂ.ಡಿ, ಪ್ರಣಮ್ಯ, ರೇಶ್ಮಾ ಬಹುಮಾನ ವಿತರಣೆ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಹಕರಿಸಿದರು. ಪ್ರೌಢಶಾಲಾ ವಿಭಾಗದ ಎಲ್ಲಾ ಬಹುಮಾನಗಳನ್ನು, ವೈಯಕ್ತಿಕ ಚಾಂಪಿಯನ್ ಗಳ ಟ್ರೋಫಿಗಳನ್ನು ಪ್ರಾಯೋಜಿಸಿದರು. ವಿಷಯವಾರು ಶಿಕ್ಷಕರು ಹಾಗೂ ಉಪನ್ಯಾಸಕರು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದವರಿಗೆ ನಗದು ಬಹುಮಾನ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ದಾನಿಗಳು ಸ್ಥಾಪಿಸಿದ ದತ್ತಿನಿಧಿಗಳ ಬಹುಮಾನವನ್ನೂ ವಿತರಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್  ಪ್ರಾಸ್ತಾವಿಕವಾಗಿ ಸ್ವಾಗತಿಸಿ, ಕೆಪಿಎಸ್ ಕೆಯ್ಯೂರು ಪ್ರಾಥಮಿಕ ವಿಭಾಗ ಮುಖ್ಯಗುರು ಬಾಬು.ಎಂ.ವಂದಿಸಿ, ಕಾಲೇಜಿನ ಪ್ರಾಂಶುಪಾಲ ಇಸ್ಮಾಯಿಲ್  ವರದಿಗಳನ್ನು ವಾಚಿಸಿದರು. ಉಪನ್ಯಾಸಕಿ ಉಮಾಶಂಕರಿ ಎಸ್.ಕೆ, ಆಂಗ್ಲ ಭಾಷಾ ಶಿಕ್ಷಕಿ ಜೆಸ್ಸಿ ಪಿ.ವಿ, ಹಾಗೂ ಸುಪ್ರಭಾ ಸಭಾ ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು. ವಿವಿಧ ನೃತ್ಯಗಳು ಹಾಗೂ ರೂಪಕಗಳನ್ನು ಪ್ರದರ್ಶಿಸಿದರು. ಎಸ್ ಡಿ ಎಂ ಸಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಸಂಸ್ಥೆಯ ಕಛೇರಿ ಸಿಬ್ಬಂದಿ, ಅಡುಗೆ ಸಿಬ್ಬಂದಿ, ಉಪನ್ಯಾಸಕರು ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
 

LEAVE A REPLY

Please enter your comment!
Please enter your name here