ಅರಿಯಡ್ಕ: ಚಿಣ್ಣರ ಕಲರವ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಅರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಿರಿಯ ವಿದ್ಯಾರ್ಥಿ ಸಂಘ ಅರಿಯಡ್ಕ ಇದರ ಆಶ್ರಯದಲ್ಲಿ ಚಿಣ್ಣರ ಕಲರವ -2022 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಪಾಪೆಮಜಲು ಸರಕಾರಿ ಪ್ರೌಢ ಶಾಲಾ ಕಾರ್ಯಾಧ್ಯಕ್ಷ ತಿಲಕ್ ರೈ ಕುತ್ಯಾಡಿಯವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಜಯಂತಿ ಎನ್, ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಹನೀಫ್ ಪಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ರೈ ಜಾರತ್ತಾರು, ಪ್ರ.ಕಾರ್ಯದರ್ಶಿ ಇಬ್ರಾಹಿಂ ಎ.ಆರ್, ಕೋಶಾಧಿಕಾರಿ ಸುಕುಮಾರ ಮಡ್ಯಂಗಳ, ಸಾಂಸ್ಕೃತಿಕ ಕಾರ್ಯದರ್ಶಿ ಇಕ್ಬಾಲ್ ಹುಸೇನ್ ಕೌಡಿಚ್ಚಾರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರುಗಳಾದ ಸಂಶುದ್ದೀನ್ ಎ.ಆರ್, ಪದ್ಮನಾಭ ಆಚಾರ್ಯ, ಬಶೀರ್ ಕೌಡಿಚ್ಚಾರು, ಮಹಮ್ಮದ್ ಬೊಳ್ಳಾಡಿ, ಶಾಲಾ ಶಿಕ್ಷಕರಾದ ಕಮಲಾಕ್ಷಿ ಕೆ, ರೆಜಿನಾ ಡಿ’ಸೋಜಾ, ಗಂಗಾಧರ ನಾಯ್ಕ ಎ, ಜ್ಯೋತಿ ರೆಬೆಲ್ಲೋ. ಮಾಲತಿ ಕೆ, ಶಾಲಾ ವಿದ್ಯಾರ್ಥಿ ನಾಯಕಿ ಆಯಿಷತ್ ಸಂಸೀನಾ ಮತ್ತಿತರರು ಉಪಸ್ಥಿತರಿದ್ದರು. ಚಿಣ್ಣರ ಕಲರವ ಕಾರ್ಯಕ್ರಮ ದ.17ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಿಯಡ್ಕದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here