ಗಾಯಕ ಪುತ್ತೂರು ಜಗದೀಶ್ ಆಚಾರ್ಯರಿಗೆ ಕುವೈಟ್‌ನಲ್ಲಿ ಗೃಹ ಸಚಿವರಿಂದ ಸನ್ಮಾನ

0

ಪುತ್ತೂರು:ಖ್ಯಾತ ಗಾಯಕ ಪುತ್ತೂರು ಜಗದೀಶ್ ಆಚಾರ್ಯ ಅವರಿಗೆ ಕುವೈಟ್‌ನಲ್ಲಿ ಸನ್ಮಾನಿಸಲಾಯಿತು.


ಭಾರತೀಯ ಪ್ರವಾಸಿ ಪರಿಷತ್ ಕುವೈಟ್ ಕರ್ನಾಟಕ ಘಟಕದ ವತಿಯಿಂದ ರಾಜ್ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆದ ‘ಕರುನಾಡ ಡಿಂಡಿಮ-2022’ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ‘ತುಳುನಾಡ ಗಾನ ಗಂಧರ್ವ’ ಪುತ್ತೂರು ಜಗದೀಶ್ ಆಚಾರ್ಯ ಅವರಿಗೆ ಗೌರವ ಸನ್ಮಾನ ಪುರಸ್ಕಾರ ಮಾಡಿದರು. ಹಲವಾರು ಗಣ್ಯರು ಭಾಗವಹಿಸಿದ್ದರು.

ಬಳಿಕ ಹಿನ್ನಲೆ ಗಾಯಕರಾದ ರಾಜೇಶ್ ಕೃಷ್ಣನ್, ಜಗದೀಶ್ ಪುತ್ತೂರು ಮತ್ತು ಶಮಿತಾ ಮಲ್ನಾಡ್ ಅವರಿಂದ ಸಂಗೀತ ರಸಮಂಜರಿ ನಡೆಯಿತು. ಆರ್.ಜೆ.ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು. ಈಗಾಗಲೇ ದೇಶ ವಿದೇಶಗಳಲ್ಲಿ ಹಲವು ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಜಗದೀಶ್ ಆಚಾರ್ಯ ಪುತ್ತೂರು ಅವರಿಗೆ ಕೆಲ ದಿನಗಳ ಹಿಂದೆಯಷ್ಟೆ ಬಹರೈನ್‌ನಲ್ಲಿ ‘ಸ್ವರ ಸಾಮ್ರಾಟ್’ ಬಿರುದು ನೀಡಿ ಸನ್ಮಾನಿಸಲಾಗಿತ್ತು.

LEAVE A REPLY

Please enter your comment!
Please enter your name here