ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ಅದ್ಧೂರಿ ನೇಮೋತ್ಸವ, ಅನ್ನಸಂತರ್ಪಣೆ

0

ಪುತ್ತೂರು: ಆರ್ಯಾಪು ಗ್ರಾಮದ ಕೂರೇಲು ಮಣ್ಣಿನಲ್ಲಿ ನೆಲೆನಿಂತು ಭಕ್ತರನ್ನು ಸಲಹುತ್ತಿರುವ ವಿಶೇಷ ಕಾರಣಿಕತೆಯನ್ನು ಹೊಂದಿರುವ ಶ್ರೀ ಮಲರಾಯ ದೈವಸ್ಥಾನದ ಶ್ರೀ ಮಲರಾಯ ಮತ್ತು ಮಲರಾಯ ಬಂಟ ಮಹಿಶಾಂತಯ ದೈವಗಳ ಅದ್ಧೂರಿ ನೇಮೋತ್ಸವವು ದ.8 ರಂದು ರಾತ್ರಿ ನಡೆಯಿತು.

ಸಂಜೆ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆದು ರಾತ್ರಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ರಾತ್ರಿ 9 ರಿಂದ ಕಳಲ್ತಾ ಗುಳಿಗ ನೇಮೋತ್ಸವ, ಕುಟುಂಬದಲ್ಲಿ ಅಗಲಿದ ಹಿರಿಯರಿಗೆ ಪ್ರಾರ್ಥನೆ, ಬಡಿಸುವ ಕಾರ್ಯಕ್ರಮ ನಡೆಯಿತು. ಆ ಬಳಿಕ ಶ್ರೀ ಮಲರಾಯ ಮತ್ತು ಮಲರಾಯ ಬಂಟ ಮಹಿಶಾಂತಯ ದೈವಗಳ ಅದ್ಧೂರಿ ನೇಮೋತ್ಸವ ನಡೆಯಿತು.

ದ.9 ರಂದು ಸಂಜೆ 7ರಿಂದ ಇತರ ದೈವಗಳಿಗೆ ತಂಬಿಲ ಸೇವೆ ನಡೆಯಿತು. ಸಾವಿರಾರು ಭಕ್ತಾಧಿಗಳು ನೇಮೋತ್ಸವದಲ್ಲಿ ಪಾಲ್ಗೊಂಡರು. ಕೂರೇಲು ಶ್ರೀ ದೈವಸ್ಥಾನದ ಆಡಳಿತ ಮುಖ್ಯಸ್ಥ ಕೆ.ಸಂಜೀವ ಪೂಜಾರಿ ಕೂರೇಲುರವರು ಭಕ್ತಾದಿಗಳನ್ನು ಸ್ವಾಗತಿಸಿ, ದೈವದ ಪ್ರಸಾದ ನೀಡಿ ಸತ್ಕರಿಸಿದರು. ಹರ್ಷಿತ್ ಕೂರೇಲು ಸಹಕರಿಸಿದರು. ಸರಸ್ವತಿ ಸಂಜೀವ ಪೂಜಾರಿ ಸಹಿತ ಕೂರೇಲು ಕುಟುಂಬಸ್ಥರು, ಗ್ರಾಮದ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here