ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿವೇಕ ಉಪನ್ಯಾಸ ಮಾಲಿಕೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ನೈತಿಕ,ಬೌದ್ಧಿಕ ಹಾಗೂ ಆಧ್ಯಾತ್ಮಿಕ ಉಪನ್ಯಾಸಗಳ ಸರಣಿ ಮಾಲಿಕೆಯ 5ನೇ ಕಾರ‍್ಯಕ್ರಮವನ್ನು ಆಯೋಜಿಸಲಾಗಿದ್ದು ಈ ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ತರಬೇತುದಾರರಾದ ಕೃಷ್ಣಮೋಹನ್ ಪಿ.ಯಸ್. ಅವರು ಭವಿಷ್ಯ ಎಂಬ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉತ್ತಮ ಅವಕಾಶಗಳು ಹಾಗೂ ಅವುಗಳ ಸದುಪಯೋಗದ ವಿಷಯವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ಕಾರ‍್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಮಹಾದೇವ ಶಾಸಿ ಮಣಿಲ, ಪ್ರಾಂಶುಪಾಲ ಚಂದ್ರಕುಮಾರ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ರವಿರಾಮ ಯಸ್.ಅತಿಥಿಗಳನ್ನು ಸ್ವಾಗತಿಸಿ, ಕಾರ‍್ಯಕ್ರಮವನ್ನು ನಿರೂಪಿಸಿದರು. ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಮುರಳೀಧರ್ ಯಸ್. ಇವರು ವಂದಿಸಿದರು.

LEAVE A REPLY

Please enter your comment!
Please enter your name here