ಕಾವು ಹೇಮನಾಥ್ ಶೆಟ್ಟಿ ಕಚೇರಿಯಲ್ಲಿ ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಣೆ

0

ಪುತ್ತೂರು: ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿಯವರ ಕಚೇರಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ 76 ನೇ ಹುಟ್ಟುಹಬ್ಬ ಆಚರಿಸಲಾಯಿತು.

ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ಮಾತನಾಡಿದ ಹೇಮನಾಥ ಶೆಟ್ಟಿರವರು ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲರಿಗೂ ಆದರ್ಶಪ್ರಾಯರಾಗಿರುವ ತ್ಯಾಗಮಯಿ ಮಹಿಳೆ ಸೋನಿಯಾ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಆಸ್ತಿ. ಬಿಜೆಪಿ ಪಕ್ಷವು ವಿದೇಶಿ ಮಹಿಳೆ ಎಂದು ಅವರ ವಿರುದ್ಧ ಬಹುದೊಡ್ಡ ಹೋರಾಟ ನಡೆಸಿದರೂ ಧೃತಿಗೆಡದೆ ಪಕ್ಷದ ನೇತೃತ್ವವಹಿಸಿ ಯಶಸ್ವಿಯಾದವರು ಸೋನಿಯಾ ಗಾಂಧಿ.76ನೇ ಹುಟ್ಟುಹಬ್ಬ ಆಚರಿಸುತ್ತಿರುವ ಸೋನಿಯಾ ಗಾಂಧಿಯವರಿಗೆ ಆಯುಷ್ಯ, ಆರೋಗ್ಯಭಾಗ್ಯವನ್ನು ದೇವರು ಕರುಣಿಸಲಿ ಎಂದು ಹಾರೈಸಿದರು.

ಮಾಜಿ ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬೆ ಮತ್ತು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಲ್ಯಾನ್ಸಿ ಮಸ್ಕರೇನಸ್ ಶುಭಹಾರೈಸಿದರು.

ರಾಜ್ಯ ಸಾಮಾಜಿಕ ಜಾಲತಾಣ ಪ್ರಧಾನ ಕಾರ್ಯದರ್ಶಿ ಕೆ.ಸಿ ಅಶೋಕ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸದಸ್ಯ ಅನ್ವರ್ ಖಾಸಿಂ, ನಗರಸಭೆ ಮಾಜಿ ಸದಸ್ಯ ಕೇಶವ ಪೂಜಾರಿ ಬೆದ್ರಾಳ, ನಗರಸಭೆ ಮಾಜಿ ಸದಸ್ಯ ಇಸಾಕ್ ಸಾಲ್ಮರ, ವಾಲ್ಟರ್ ಡಿಸೋಜ ಸಿದ್ಯಾಳ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹನೀಫ್ ಸಿದ್ಯಾಳ, ಗ್ರಾಮ ಪಂಚಾಯತ್ ಸದಸ್ಯ ಉನೈಸ್ ಗಡಿಯಾರ, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಶಾನು ಬಪ್ಪಳಿಗೆ, ಹನೀಫ್ ಮುಂಡೂರು, ಮೂಸೆ ಕಬಕ, ರಹಿಮಾನ್ ಸಂಪ್ಯ, ಬ್ಲಾಕ್ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಗಂಗಾಧರ್ ಶೆಟ್ಟಿ ಎಲಿಕ ಮತ್ತಿತರರು ಹಾಜರಿದ್ದರು. ಶಂಶುದ್ದೀನ್ ಅಜ್ಜಿನಡ್ಕ ಸ್ವಾಗತಿಸಿದರು.

LEAVE A REPLY

Please enter your comment!
Please enter your name here