ನೆಲ್ಯಾಡಿ-ಪಡುಬೆಟ್ಟು ಶಾಲೆಯಲ್ಲಿ ಕ್ರೀಡಾಕೂಟ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಡಿ.31ರಂದು ನಡೆಯುವ ವಾರ್ಷಿಕೋತ್ಸವದ ಪ್ರಯುಕ್ತ ಡಿ.10ರಂದು ಕ್ರೀಡಾಕೂಟ ನಡೆಯಿತು. 


ಬೆಳ್ಳಾರೆ ಕೆಪಿಎಸ್ ಸ್ಕೂಲ್‌ನ ಪದವೀಧರೇತರ ಮುಖ್ಯಶಿಕ್ಷಕ ಮಾಯಿಲಪ್ಪ ಜಿ., ಕ್ರೀಡಾಕೂಟ ಉದ್ಘಾಟಿಸಿದರು. ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಶೀನಪ್ಪ ಗೌಡ ಬರೆಮೇಲು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ನೆಲ್ಯಾಡಿ ಶಿಲ್ಪಾ ಹಾರ್ಡ್‌ವೇರ್‌ನ ಮಾಲಕ ಶಿವಣ್ಣ ಪಿ ಹೆಗ್ಡೆ, ಪಡುಬೆಟ್ಟು ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ಜಿ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು, ಶಾಲಾ ಮುಖ್ಯಗುರು ಜೆಸ್ಸಿ ಕೆ.ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಹಳೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಸ್ಥಳೀಯರಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಕ್ರೀಡಾ ನಿರೂಪಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಸುರೇಶ್ ಪಡಿಪಂಡ ಕಾರ್ಯಕ್ರಮ ನಿರೂಪಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಬೀದಿಮಜಲು ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಲೀಲಾವತಿ ಎಂ., ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here