ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ

0

ಕಡಬ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಶಿವಪುರದಲ್ಲಿ ನಡೆದ ಸಬ್ ಜೂನಿಯರ್ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಪಿ.ಇವರನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ತಂಡದಲ್ಲಿ ಶ್ರೇಯಾ ಪಿ.,ಅವರು ಉತ್ತಮ ಪ್ರದರ್ಶನ ನೀಡಿದರು. ಈಕೆ ಕಡಬ ತಾಲೂಕಿನ ಕಾಯಂದೂರು ನಿವಾಸಿ ರಮೇಶ್ ಗೌಡ ಹಾಗೂ ಯಶೋಧ ದಂಪತಿಯ ಪುತ್ರಿ. ಈಕೆಗೆ ಅಬ್ದುಲ್ ಖಾದರ್ ಜನಪ್ರಿಯ ಕಡಬ ಇವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here