ಕೊಣಾಜೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಕನ್ನಡಕ ವಿತರಣೆ

0

ನೆಲ್ಯಾಡಿ: ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೊಣಾಜೆ, ಗ್ರಾಮ ಪಂಚಾಯತ್ ಕೊಣಾಜೆ, ಹಾಲು ಉತ್ಪಾದಕರ ಸಹಕಾರ ಸಂಘ ಕೊಣಾಜೆ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಣಾಜೆ ಶಾಖೆ, ಶ್ರೀದುರ್ಗಾಂಬಿಕಾ ಭಜನಾ ಮಂಡಳಿ ಮತ್ತು ಸೇವಾ ಸಮಿತಿ ಕೊಣಾಜೆ ಇವರ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಜ್ಞಾನ ವಿಕಾಸದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಕನ್ನಡ ವಿತರಣೆ ಕಾರ್ಯಕ್ರಮ ಬಿಳಿನೆಲೆ ವಲಯದ ಕೊಣಾಜೆಯಲ್ಲಿ ನಡೆಯಿತು.


ಬಿಳಿನೆಲೆ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ತಮ್ಮಯ ಗೌಡ ಉದ್ಘಾಟಿಸಿದರು. ಕೊಣಾಜೆ ಒಕ್ಕೂಟದ ಅಧ್ಯಕ್ಷ ಡೀಕಯ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು, ಉಜಿರೆ ಎಸ್‌ಡಿಯಂ ಆಸ್ಪತ್ರೆಯ ವೈದ್ಯರಾದ ಡಾ.ಸುಭಾಶ್ಚಂದ್ರ, ಡಾ.ಚಿನ್ಮಯ್, ಡಾ.ಯಶಸ್ವಿನಿ, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಪ್ಪ ಗೌಡ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಘುಚಂದ್ರ, ಕೊಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್.ಆನಂದ, ದುರ್ಗಾಂಬಿಕ ಭಜನಾ ಮಂಡಳಿ ಅಧ್ಯಕ್ಷ ವೀರಪ್ಪ ಕಾಂತ್ರೇಲು, ದುರ್ಗಾಂಬಿಕ ಸೇವಾ ಸಮಿತಿಯ ಅಧ್ಯಕ್ಷ ಪುಂಡರೀಕಾಕ್ಷ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನಾ ಕಾರ್ಯಕ್ರಮ ನಿರೂಪಿಸಿ, ಬಿಳಿನೆಲೆ ವಲಯದ ಮೇಲ್ವಿಚಾರಕ ಆನಂದ ಸ್ವಾಗತಿಸಿದರು. ಕೊಣಾಜೆ ಗ್ರಾಮದ ಸೇವಾ ಪ್ರತಿನಿಧಿ ಬೇಬಿ ವಂದಿಸಿದರು. ಉಜಿರೆ ಎಸ್‌ಡಿಎಂ ಆಸ್ಪತ್ರೆಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ರೋಗಿಗಳಿಗೆ ಉಚಿತ ಔಷಧ ವಿತರಣೆ ಹಾಗೂ ಕನ್ನಡ ವಿತರಣೆ ಮಾಡಲಾಯಿತು. 189ಜನ ಸದಸ್ಯರು ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here