ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ: ಇಚ್ಲಂಪಾಡಿಯ ನಿಕ್ಷಿತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಬೆಳಗಾವಿಯಲ್ಲಿ ನಡೆದ ವಿಶೇಷ ಚೇತನ ಮಕ್ಕಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕಡಬ ತಾಲೂಕಿನ ಇಚ್ಲಂಪಾಡಿಯ ನಿಕ್ಷಿತ್ ಡಿ.ಕೆ.ಅವರು 200ಮೀ.ಓಟ, ಉದ್ದಜಿಗಿತ ಹಾಗೂ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಎನ್.ಕೆ.ಗಣಪಯ್ಯ ರೋಟರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಸಕಲೇಶಪುರ ಇಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿರುವ ನಿಕ್ಷಿತ್‌ರವರು ಇಚ್ಲಂಪಾಡಿ ಗ್ರಾಮದ ಕೆರ್ನಡ್ಕ ನಿವಾಸಿ ಧನಂಜಯ ಹಾಗೂ ರೂಪ ದಂಪತಿ ಪುತ್ರ.

LEAVE A REPLY

Please enter your comment!
Please enter your name here