ಜಿಲ್ಲಾ ಮಟ್ಟದ ಛದ್ಮವೇಷ ಸ್ಪರ್ಧೆಯಲ್ಲಿ ನಿಭಾ ರೈ ಪ್ರಥಮ

0

 ಪುತ್ತೂರು: ಸುಳ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ 7ನೆ ತರಗತಿಯ ವಿದ್ಯಾರ್ಥಿನಿ ನಿಭಾ ಬಿ ರೈ ಪ್ರಥಮ ಸ್ಥಾನ ಗಳಿಸಿದ್ದಾರೆ.

ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ಇವರನ್ನು ತರಬೇತಿಗೊಳಿಸಿದ್ದರು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಹಾಗೂ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದ್ದಾರೆ. ನಿಭಾ ರೈ ರವರು ವಿದ್ಯಾರಶ್ಮಿ ವಿದ್ಯಾಲಯದ ಬೋಧಕೇತರ ಸಿಬ್ಬಂದಿ ಬಾಲಚಂದ್ರ ರೈ ಕೆರೆಕ್ಕೋಡಿ ಮತ್ತು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಸವಣೂರು ಶಾಖೆಯ ಉದ್ಯೋಗಿ ಶೋಭಾ ಬಿ ರೈ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here