ಪ್ರತಿಭಾ ಕಾರಂಜಿ: ರಾಮಕುಂಜ ಆ.ಮಾ. ಶಾಲೆಯ ವಂಶಿ, ಪ್ರಜ್ಞಾ ರಾಜ್ಯಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.13ರಂದು ನಡೆದ ದ.ಕ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ತುಳು-ಕಂಠಪಾಠ ಸ್ಪರ್ಧೆಯಲ್ಲಿ 7ನೇ ತರಗತಿಯ ವಂಶಿ ಪಿ. ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಕೊಯಿಲ ಗ್ರಾಮದ ಏಣಿತ್ತಡ್ಕ ನಿವಾಸಿ ಚಂದ್ರಶೇಖರ ಹಾಗೂ ಪ್ರೇಮಾ ದಂಪತಿ ಪುತ್ರಿ. ಪ್ರೌಢಶಾಲಾ ವಿಭಾಗದ ತುಳು-ಭಾಷಣ ಸ್ಪರ್ಧೆಯಲ್ಲಿ 8ನೇ ತರಗತಿಯ ಪ್ರಜ್ಞಾ ಎಂ.ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಆಲಂಕಾರು ಪೆರಾಬೆ ಚಿದಾನಂದ ಭಂಡಾರಿ ಮತ್ತು ಆಶಾಲತಾ ದಂಪತಿಯ ಪುತ್ರಿ. ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತಾಧಿಕಾರಿ, ಮುಖ್ಯಶಿಕ್ಷಕರು, ಶಿಕ್ಷಕರು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here