ಡಿ.17:  ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

0

ಪುತ್ತೂರು : ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಡಿ.17 ಶನಿವಾರದಂದು ಜರಗಲಿದೆ. ಪೂರ್ವಾಹ್ನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ ಅಚ್ಯುತ ನಾಯಕ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಬಿಎಸ್‌ಬಿಎಸ್ ದ ಬಿ-ಸ್ಕೂಲ್ ನ ಉಪಾಧ್ಯಕ್ಷರಾದ ವಿನಯ್ ವಿ ಜಾದವ್ ರವರು ಭಾಗವಹಿಸಲಿದ್ದಾರೆ. ಜೊತೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕ ಸಂತೋಷ ಬಿ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಬಿ. ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು, ಹಿರಿಯ ವಿದ್ಯಾರ್ಥಿಗಳು ಮತ್ತು ಎಲ್ಲಾ ಪೋಷಕರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಪ್ರಕಟಣೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here