ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ಸ್ಕೂಟರ್, ಲಾರಿ ಡಿಕ್ಕಿ -ಸ್ಕೂಟರ್ ಸವಾರನಿಗೆ ಗಾಯ

0

ಪುತ್ತೂರು: ಸ್ಕೂಟರ್‌ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪರ್ಲಡ್ಕ ಜಂಕ್ಷನ್ ನಲ್ಲಿ ಡಿ.15  ರಂದು ನಡೆದಿದ್ದು, ಅಪಘಾತದಿಂದಾಗಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ.


ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಮತ್ತು ರಾಷ್ಡ್ರೀಯ ಹೆದ್ದಾರಿಯನ್ನು ದಾಟಿ ಪರ್ಲಡ್ಕ ರಸ್ತೆ ಕಡೆ ಹೋಗುತ್ತಿದ್ದ ಸ್ಕೂಟರ್ ನಡುವೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಒಳತ್ತಡ್ಕ ನಿವಾಸಿ ಕಾಂತಪ್ಪ ಮೂಲ್ಯ ಎಂಬವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here