ಕೆದಂಬಾಡಿ ಗ್ರಾ.ಪಂ ಗ್ರಂಥಾಲಯ ಚಿಣ್ಣರ ಚಿತ್ತಾರ ಅಭಿಯಾನ ಉದ್ಘಾಟನೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯ ಕಛೇರಿಯಲ್ಲಿ ಓದುವ ಬೆಳಕು ಕಾರ್ಯಕ್ರಮದಲ್ಲಿ ಚಿಣ್ಣರ ಚಿತ್ತಾರ ಅಭಿಯಾನವನ್ನು ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರರವರು ದ.15ರಂದು ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ, ಸದಸ್ಯರುಗಳಾದ ಕೃಷ್ಣ ಕುಮಾರ್ ಇದ್ಯಪೆ, ರೇವತಿ, ವಿಠಲ ರೈ ಮಿತ್ತೋಡಿ, ಜಯಲಕ್ಷ್ಮೀ ಬಲ್ಲಾಳ್, ಸುಜಾತ ಎನ್, ಅಸ್ಮಾ, ಸುಜಾತ ಉಪಸ್ಥಿತರಿದ್ದರು. ತಿಂಗಳಾಡಿ ಶಾಲಾ ವಿದ್ಯಾರ್ಥಿಗಳು ಓದುವ ಬೆಳಕು ಚಿಣ್ಣರ ಚಿತ್ತಾರದಲ್ಲಿ ಭಾಗವಹಿಸಿದ್ದರು. ಚಿಣ್ಣರ ಚಿತ್ತಾರ ಕಾರ್ಯಕ್ರಮಕ್ಕೆ ಬೇಕಾದ ಸಾಮಾಗ್ರಿಗಳನ್ನು ಗ್ರಾಪಂ ವತಿಯಿಂದ ನೀಡಲಾಯಿತು. ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ಸುನಂದ ರೈ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಾರಿಕಾ ಎಂ ಚಿಣ್ಣರ ಚಿತ್ತಾರ ಅಭಿಯಾನಕ್ಕೆ ವ್ಯವಸ್ಥೆ ಮಾಡಿದ್ದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here