ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸ್ವಸ್ತಿಕ್‌ ಶರ್ಮ ಯಕ್ಷ ಪ್ರತಿಭಾ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು :ಯಕ್ಷಗಾನಚಾರ್ಯ ಪಾರ್ತಿಸುಬ್ಬನ ತವರು ನೆಲ ಕುಂಬ್ಳೆಯ ಶೇಡಿಕಾವಿನಲ್ಲಿ ಡಿ.18 ರಂದು ನಡೆಯಲಿರುವ ಪ್ರಥಮ ಕಣಿಪುರ ಯಕ್ಷೋತ್ಸವದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸ್ವಸ್ತಿಕ್‌ ಶರ್ಮ ಪಿ ಯಕ್ಷಪ್ರತಿಭಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕುಂಬ್ಳೆ ಸೀಮೆಯ ಬಳ್ಳಂಬೆಟ್ಟು ಮೂಲದ ಖ್ಯಾತ ಪುಂಡು ವೇಷಧಾರಿ ದಿ. ಶ್ರೀಧರ ಭಂಡಾರಿ ಸ್ಮರಣಾರ್ಥ ಪ್ರಶಸ್ತಿ ನೀಡಲಿದ್ದು, ಪ್ರಶಸ್ತಿಯು ತಲಾ ಐದು ಸಾವಿರ ರೂ ನಗದು ಮತ್ತು ಸ್ಮರಣಿಕೆ, ಸನ್ಮಾನ ಪತ್ರ, ಪಾರಿತೋಷಕವನ್ನೊಳಗೊಂಡಿದೆ. ಇವರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದ ಪಳ್ಳತ್ತಡ್ಕದ ಕೇಶವ ಪಿ ಮತ್ತು ದಿವ್ಯಾ ಪಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here