ಕೊಂಬೆಟ್ಟು ಶಾಲೆಯ ವಿದ್ಯಾರ್ಥಿನಿ ಅನಾರೋಗ್ಯದಿಂದ ನಿಧನ

0

ಪುತ್ತೂರು: ಕೊಂಬೆಟ್ಟು ಸರಕಾರಿ‌ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಅನಾರೊಗ್ಯದಿಂದಾಗಿ ಡಿ.15 ರ ತಡ ರಾತ್ರಿ ನಿಧನರಾಗಿದ್ದಾರೆ.


ಕಾವು ನಿವಾಸಿ ಧರ್ಮಲಿಂಗಮ್ ತಾಯಿ ತಮಿಳ್ ಸೆಲ್ವಿ ಎಂಬವರ ಪುತ್ರಿ ಅನುಶ್ರೀ ನಿಧನರಾದವರು. ಅನುಶ್ರೀ ಅವರಿಗೆ ಕಳೆದ ಮೂರು ದಿನಗಳಿಂದ ಜ್ವರ ಕಾಣಿಸಿದ್ದು, ಪುತ್ತೂರು ಆಸ್ಪತ್ರೆಯಿಂದ ಔಷಧಿ ಪಡೆದಿದ್ದರು. ಡಿ.15 ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆ ತರುವಾಗ ಆಕೆ ಮೃತಪಟ್ಟಿದ್ದಾರೆ.

ಕೊಂಬೆಟ್ಟು ಶಾಲೆಯಲ್ಲಿ ಸಂತಾಪ – ರಜೆ ಘೋಷಣೆ
ಅನುಶ್ರೀ ಅವರ ನಿಧನದ ಹಿನ್ನಲೆಯಲ್ಲಿ ಡಿ.16 ರಂದು ಬೆಳಿಗ್ಗೆ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ಮೃತ ಅನುಶ್ರೀ ಅವರಿಗೆ ಸಂತಾಪ ಸೂಚಿಸಿ ನುಡಿನಮನ ಸಲ್ಲಿಸಲಾಯಿತು. ಶಾಲಾ ಉಪ ಪ್ರಾಂಶುಪಾಲ ವಸಂತ ಮೂಲ್ಯ ಅವರು ರಜೆ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here