ಡಿ.18: ನೆಲ್ಯಾಡಿಯಲ್ಲಿ ಸಂಯುಕ್ತ ಕ್ರಿಸ್ಮಸ್

0

ನೆಲ್ಯಾಡಿ: ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿ ನೆಲ್ಯಾಡಿ ಇದರ ಆಶ್ರಯದಲ್ಲಿ ನೆಲ್ಯಾಡಿ ಅಸುಪಾಸಿನ ಕ್ರೈಸ್ತ ದೇವಾಲಯಗಳು, ವಿದ್ಯಾಸಂಸ್ಥೆಗಳು ಮತ್ತು ಕಾನ್ವೆಂಟ್‌ಗಳ ಸಹಯೋಗದಲ್ಲಿ ’ಸಂಯುಕ್ತ ಕ್ರಿಸ್ಮಸ್ ಆಚರಣೆ-2022’ ಡಿ.18ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಸಂಜೆ 4.30ಕ್ಕೆ ನೆಲ್ಯಾಡಿ ಬಸ್ ನಿಲ್ದಾಣದಿಂದ ಭವ್ಯ ಮೆರವಣಿಗೆ ನಡೆಯಲಿದೆ. 6 ಗಂಟೆಗೆ ಗಾಂಧಿಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಕೊಟ್ಟಾಯಂನ ಬಿಷಪ್ ಗೀವರ್ಗೀಸ್ ಮಾರ್ ಅಫ್ರೇಮ್‌ರವರು ಉದ್ಘಾಟನೆ ಮತ್ತು ಕ್ರಿಸ್ಮಸ್ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಕ್ರಿಶ್ಚಿಯನ್ ಡೆವಲಪ್‌ಮೆಂಟ್ ಕೌನ್ಸಿಲ್‌ನ ಅಧ್ಯಕ್ಷ ಜಿ.ಕೆನಡಿ ಶಾಂತಕುಮಾರ್‌ರವರು ಭಾಗವಹಿಸಲಿದ್ದಾರೆ. ಸಂಯುಕ್ತ ಕ್ರಿಸ್ಮಸ್ ಆಚರಣಾ ಸಮಿತಿ ಅಧ್ಯಕ್ಷ ಫಾ.ಸಿಬಿ ಪನಚಿಕ್ಕಲ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ವಿವಿಧ ಚರ್ಚ್ ಮತ್ತು ಸಂಸ್ಥೆಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿ ಸದಸ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here