ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ, ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸಂಕ್ರಮಣ ಸೇವೆ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ದ.16 ರಂದು ಶ್ರೀ ಕ್ಷೇತ್ರದಲ್ಲಿ ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ ನಡೆಯಿತು.

ಶ್ರೀ ಕ್ಷೇತ್ರದ ಅರ್ಚಕರಾದ ಕುಂಡ ಮೊಗೇರ, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ತರಾದ ಗಣೇಶ್ ಪೂಜಾರಿ ಕೆಮ್ಮಿಂಜೆರವರು ಸಂಕ್ರಮಣ ಸೇವೆಯನ್ನು ನಡೆಸುವಲ್ಲಿ ಸಹಕರಿಸಿದರು. ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ್ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ್ ಪೂಜಾರಿ ಮೊಟ್ಟೆತ್ತಡ್ಕ, ಕಾರ್ಯದರ್ಶಿ ದಿನೇಶ್ ಮಣ್ಣಾಪು, ಗಂಗಾಧರ್ ಮಣ್ಣಾಪು, ವಿಶ್ವನಾಥ ನಾಯ್ಕ ಅಮ್ಮುಂಜ, ಸುಧೀರ್ ಅತ್ತಾಳ, ಗುರುವ ಮಣ್ಣಾಪು, ವಿಶ್ವಜಿತ್ ಅಮ್ಮುಂಜ, ಉಮೇಶ್ ಮಣ್ಣಾಪು, ಉಮೇಶ್ ರೈ ನಡುಬೈಲು ಬೆಂಗಳೂರು, ಸುಜೀರ್ ಶೆಟ್ಟಿ ನುಳಿಯಾಲು, ನಾರಾಯಣ ನಾಯ್ಕ ಸಿಂಹವನ ಪಂಜಳ, ಪಂಜಳ ಶ್ರೀರಾಂ ಫ್ರೆಂಡ್ಸ್ ಸದಸ್ಯರು ಸಹಿತ ಊರಿನ ಮತ್ತು ಶ್ರೀ ಕ್ಷೇತ್ರದ ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೂರಾರು ಸಂಖ್ಯೆಯಲ್ಲಿ ಭಕ್ತರು ಧಾರ್ಮಿಕ ವಿಧಿ ವಿಧಾನದಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು.

ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ.1200) ನಡೆಯಲಿದ್ದು, ಆದಿತ್ಯವಾರ, ಮಂಗಳವಾರ, ಶುಕ್ರವಾರ ಭಕ್ತಾಧಿಗಳಿಗೆ ಪ್ರಾರ್ಥನೆ ಸಲ್ಲಿಸಲು ಶ್ರೀ ಕ್ಷೇತ್ರದಲ್ಲಿ ಅವಕಾಶವಿದೆ. ಅಗೇಲು ಸೇವೆ ನೀಡುವ ಭಕ್ತಾಧಿಗಳು ಎರಡು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರ ಮಣ್ಣಾಪು ಆಡಳಿತ ಸಮಿತಿ(ಮೊ:9591546107, 7349237945, 7760580714)ಯನ್ನು ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಬಗ್ಗೆ ರಚನೆಗೊಂಡ ಶ್ರೀ ಸ್ವಾಮಿ ಕೊರಗಜ್ಜ ಕುಣಿತಾ ಭಜನಾ ತಂಡ ಮಣ್ಣಾಪು ಇದರ ಉದ್ಘಾಟನೆ ನೆರವೇರಿತು. ಜೊತೆಗೆ ಕು.ಸವಿತಾ ಪಂಜ ಇವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಕುಣಿತಾ ಭಜನಾ ಕಾರ್ಯಕ್ರಮ ನೆರವೇರಲ್ಪಟ್ಟಿತು.

LEAVE A REPLY

Please enter your comment!
Please enter your name here