ನಿಡ್ಪಳ್ಳಿ; ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0
ನಿಡ್ಪಳ್ಳಿ; ಶ್ರೀ ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಗಳ ದೈವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿಯ ವರ್ಷಾವದಿ ಜಾತ್ರೋತ್ಸವ ಜ. 19 ರಿಂದ 25 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಡಿ.16 ರಂದು ನಿಡ್ಪಳ್ಳಿ ಗುತ್ತು ಮನೆಯಲ್ಲಿ ನಡೆಯಿತು.
ಅನುವಂಶಿಕ ಆಡಳಿತ ಮೊಕ್ತೇಸರರಾದ ಪ್ರವೀಣ್ ಎನ್.ಆರಿಗ ನಿಡ್ಪಳ್ಳಿ ಗುತ್ತು, ಶ್ರೀ ಶಾಂತದುರ್ಗಾ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ನಿಕಟ ಪೂರ್ವ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ, ಬಾರಿಕೆ ಮನೆಯವರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here