ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣ್ವಿಕಾ ರೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0


ಪುತ್ತೂರು: ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ಉಡುಪಿ, ೩ನೇ ರಾಜ್ಯ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿಯ ಪ್ರಣ್ವಿಕಾ ರೈ (ಕರ್ನೂರು ಮುನ್ನಗದ್ದೆ ನಿವಾಸಿ ಬಾಲಕೃಷ್ಣ ರೈ ಮತ್ತು ಗಾಯತ್ರಿ ರೈ ದಂಪತಿಗಳ ಪುತ್ರಿ )ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಪಂದ್ಯಾಟದ ಆಲ್ ರೌಂಡರ್ ಆಗಿ ಗುರುತಿಸಿಕೊಂಡಿದ್ದು ತಂಡದ ಮುನ್ನಡೆಗೆ ಮುಂಚೂಣಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾಳೆ. ಶಾಲಾ ಆಡಳಿತ ಮಂಡಳಿ, ಮುಖ್ಯಗುರುಗಳು, ಶಿಕ್ಷಕ ವೃಂದದವರು ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here